ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ
ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರಮುಖರ ವಿಶೇಷ ಸಭೆಯನ್ನು ಬೀಳಗಿ ಶಾಸಕರ ಕಚೇರಿಯಲ್ಲಿ ನ. 28 ರಂದು ರವಿವಾರ ಸಾಯಂಕಾಲ 4 ಘಂಟೆಗೆ ಆಯೋಜಿಸಲಾಗಿದೆ. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಸಚಿವರಾದ ಸನ್ಮಾನ್ಯ ಶ್ರೀ ಕೆ. ಎಸ್. ಈಶ್ವರಪ್ಪನವರು, ಸಚಿವ ಶ್ರೀ ಮುರುಗೇಶ್ ನಿರಾಣಿ , ಮಾಜಿ ಶಾಸಕರು ಶ್ರೀ ನೆ. ಲ. ನರೇಂದ್ರ ಬಾಬು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹಣಮಂತ ಆರ್. ನಿರಾಣಿ, ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಪಿ. ಎಚ್. ಪೂಜಾರ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿವೇಕಾನಂದ ಡಬ್ಬಿ ಜಿಲ್ಲಾ ಅಧ್ಯಕ್ಷರಾದ ಎಸ್ ಟಿ ಪಾಟೀಲರು,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಯ್ಯ ಮೂಗನೂರಮಠ ಇನ್ನೂ ಅನೇಕ ರಾಜ್ಯ ಪದಾಧಿಕಾರಿಗಳು ಹಾಗೂ ರಾಜ್ಯ ಮುಖಂಡರು ಭಾಗವಹಿಸುವರು…….
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳ ಪ್ರಮುಖರು ಭಾಗವಹಿಸಲು ವಿನಂತಿ…
ವರದಿ.ಸುಲೇಮಾನ್ ರಾಜಪೇಲೆ. ಬೀಳಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030