ಮಾ.10 ರೊಳಗೆ ತಾಲ್ಲೂಕು ಟಾಸ್ಕ್ ಫೋಸ್೯ ಸಭೆ ನಡೆಸಿ ವರದಿ ಸಲ್ಲಿಸಿ
ತಾಲ್ಲೂಕು ಮಟ್ಟದಲ್ಲಿ ಬರ ಪರಿಸ್ಥಿತಿ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಾಲ್ಲೂಕು ಟಾಸ್ಕ್ ಫೋಸ್೯ ಸಮಿತಿ ಸಭೆ ನಡೆಸಿ ವರದಿಯನ್ನು ಮಾಚ್೯10 ರೊಳಗಾಗಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರ ಪರಿಹಾರ ಕುರಿತಂತೆ ಸಭೆ ನಡೆಸಿ ಮಾತನಾಡಿದರು.ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ನಂತರ ಸಭೆ ನಡೆಸಲು ಸಾಧ್ಯತೆ ಇರುವುದಿಲ್ಲ. ಅಧಿಕಾರಿಗಳು ಏಪ್ರಿಲ್ ಮೇ ಮಾಹೆಯಲ್ಲಿ ಬರದ ಪರಿಸ್ಥಿತಿ ಮುಂದುವರೆದರೆ ಕುಡಿಯುವ ನೀರು ಒದಗಿಸಲು ಬೇಕಿರುವ ಸಿದ್ಧತೆಗಳನ್ನು ಮಾಡಿಕೊಳ್ಳಿ. ಜನ ಮತ್ತು ಜಾನುವಾರುಗಳಿಗೆ ತೊಂದರೆಯಾಗಬಾರದು ಎಂದರು.
ಸಭೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಶಾಸಕ ಪಿ.ರವಿಕುಮಾರ್, ಕೆ.ಎಂ ಉದಯ್, ದರ್ಶನ್ ಪುಟ್ಟಣ್ಣಯ್ಯ,ಮೈ ಶುಗರ್ ಅಧ್ಯಕ್ಷ ಗಂಗಾಧರ್,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು…
ವರದಿ. ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030