ಮಂಡ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಸ್ಥಳದಲ್ಲೇ ಪರಿಹಾರ ವಿತರಣೆ…!!!

Listen to this article

ಮಂಡ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಸ್ಥಳದಲ್ಲೇ ಪರಿಹಾರ ವಿತರಣೆ

ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಮಂಡ್ಯದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾತನೂರಿನಲ್ಲಿ ಕೆರೆ ಕೋಡಿ ಒಡೆದು ರಸ್ತೆಗಳು ಕೊಚ್ಚಿ ಹೋಗಿದ್ದು, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿ‌ಯಾಗಿತ್ತು. ಮಳೆಹಾನಿಯನ್ನು ಪರಿಶೀಲಿಸಿ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಬಳಿಕ ಉಮ್ಮಡಹಳ್ಳಿಯಲ್ಲಿ ಮಳೆಯಿಂದ ಮನೆ ಕುಸಿದು 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವುದನ್ನು ಪರಿಶೀಲನೆ ನಡೆಸಿ, ನಷ್ಟಕ್ಕೊಳಗಾದವರಿಗೆ ಸ್ಥಳದಲ್ಲೇ 90 ಸಾವಿರ ಪರಿಹಾರ ಚೆಕ್ ವಿತರಿಸಿದರು.

ಶೀಘ್ರದಲ್ಲೇ ಇನ್ನಷ್ಟು ಹೆಚ್ಚಿನ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೇಷ್ಮೆ ಮತ್ತು ಯುವಜನ ಸಬಲೀಕರಣ ಖಾತೆ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ, ಶಾಸಕರಾದ ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್. ಅಶ್ವತಿ, ಉಪವಿಭಾಗಾಧಿಕಾರಿ ಐಶ್ವರ್ಯ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ವಾಗಿಶ್. ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend