ಚುನಾವಣಾ ಸಾಮಾನ್ಯ ವೀಕ್ಷಕರಿಂದ ಪರಿಶೀಲನೆ
ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುವ ನೀರಜ್ ಕುಮಾರ್ ಅವರು ಇಂದು ಮದ್ದೂರು ತಾಲ್ಲೂಕಿನ ಸ್ಟ್ರಂಗ್ ರೂಂ ಹಾಗೂ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳಿಂದ ಸ್ಟ್ರಂಗ್ ರೂಂ ಭದ್ರತೆಗೆ ಮಾಡಿರುವ ವ್ಯವಸ್ಥೆಗಳು ಹಾಗೂ ಮತಗಟ್ಟೆಗಳಲ್ಲಿ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಸಿದ್ಧ ಮಾಡಿರುವ ಮೂಲಭೂತ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಲೋಕನಾಥ್, ವೀಕ್ಷಕರ ಸಮನ್ವಯಾಧಿಕಾರಿ ರಂಗಸ್ವಾಮಿ ಉಪಸ್ಥಿತರಿದ್ದರು…
ವರದಿ. ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030