ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮದ್ದೂರು ತಾಲ್ಲೂಕಿನ ಮಲ್ಲನಕುಪ್ಪೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚೆಕ್ ಪೋಸ್ಟ್ ನಲ್ಲಿ ಚಲಿಸುವ ಎಲ್ಲಾ ವಾಹನಹಳ ಪರಿಶೀಲನೆ ನಡೆಸಬೇಕು.
ತಾವು ಮಾಡುವ ಕೆಲಸಗಳನ್ನು ಜಿಲ್ಲಾ ದೂರು ನಿರ್ವಾಹಣಾ ಕೋಶದಿಂದ ವೀಕ್ಷಿಸಲಾಗುತ್ತಿದೆ. ಇದರ ಜೊತೆಗೆ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವೀಕ್ಷಕರು ಸಹ ತಮ್ಮ ಕೆಲಸಗಳ ಬಗ್ಗೆ ನಿಗಾ ವಹಿಸುತ್ತಾರೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಲೋಪ ಕಂಡುಬಂದರೆ ನೋಟೀಸ್ ಜಾರಿ ಮಾಡಿ ಆರ್.ಪಿಆಕ್ಟ್ ಅಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಸಹಾಯಕ ಚುನಾವಣಾಧಿಕಾರಿ ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು…
ವರದಿ. ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030