ಮಾಗಡಿ ನಗರದಲ್ಲಿಂದು ಪತ್ರಿಕಾ ದಿನಾಚರಣೆಯ ಸಮಾರಂಭ:-ಇಂದು ಮಾಗಡಿ ನಗರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನದಲ್ಲಿ (ಬೆಂಗಳೂರು ಸಮೀಪವಿರುವ) ಬೆಳಿಗ್ಗೆ11.30 ಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಗಡಿ ಶಾಖ ಘಟಕದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಬಾಷಣಕಾರರಾಗಿ ಭಾಗವಹಿಸಿದ್ದ ನಾನು “ಇಂದಿನ ದಿನಗಳಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳು” ಕುರಿತಂತೆ ಸಮಗ್ರ ವಿಷಯ ಮಂಡಿಸಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಶ್ರೀಶ್ರೀ ಇಮ್ಮಡಿ ಬಸವರಾಜ ಸ್ವಾಮೀಜಿಗಳು ವಹಿಸಿದ್ದರು,ಉದ್ಗಾಟನೆಯನ್ನು ಮಾಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಶ್ರೀನಿವಾಸ ಹಾಗೂ ಗಣ್ಯಮಾನರು ನೆರವೇರಿಸಿದರು ,ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಂಗಾಧರ್ ಬೈರಾಪಟ್ಟಣ ವಹಿಸಿದ್ದರು,ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಎಚ್.ಎಂ.ರೇವಣ್ಣ,ಪಟ್ಟಣ ಪಂಚಾಯಿತಿ ಅಧ್ಯಕ್ಷರು,ಜೆ.ಡಿ.ಎಸ್.ಮಹಿಳಾ ಘಟಕದ ಅಧ್ಯಕ್ಷಿಣಿ,ಅಧಿಕಾರಿಗಳು,ಸಾಹಿತಿಗಳು ಹಾಗೂ ಇನ್ನೀತರ ಗಣ್ಯಮಾನ್ಯರು ಉಪಸ್ಥಿತರಿದ್ದ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನೂರಾರು ಜನರು ಭಾಗವಹಿಸಿ ಯಶಸ್ವಿಗೊಳಿಸಿದರು. ಬಂಗ್ಲೆ ಮಲ್ಲಿಕಾರ್ಜುನ,ರಾಜ್ಯಾಧ್ಯಕ್ಷರು,ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ ವಾಯ್ಸ್..
ವರದಿ. ಮಂಜುನಾಥ್, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030