ಮೊಳಕಾಲ್ಮುರು: ಪಟ್ಟಣದ ಹೊರವಲಯದ ಕೋವಿಡ್ ಕೇಂದ್ರದಲ್ಲಿ ಅವ್ಯವಸ್ಥೆ: ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು.!

Listen to this article

ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣದ ಹೊರವಲಯದ ಆದರ್ಶ ಕೋವಿಡ್ ಕೇಂದ್ರದಲ್ಲಿ ಅವ್ಯವಸ್ಥೆ: ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು ಆದರ್ಶ ಶಾಲೆ ಬಳಿ ಇರುವ ಆರ್.ಎಂ.ಎಸ್.ಎ. ಬಾಲಕಿಯರ ವಸತಿ ಶಾಲೆಯಲ್ಲಿನ ಕೋವಿಡ್ ಸೆಂಟರ್ ಅವ್ಯವಸ್ಥೆ ಬಗ್ಗೆ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ತಹಶೀಲ್ದಾರ್ ಟಿ ಸುರೇಶ್ ಕುಮಾರ್, ಸಚಿವ ಬಿ. ಶ್ರೀರಾಮುಲುರವರ ಆಪ್ತ ಸಹಾಯಕ ಪಾಪೇಶ್ ನಾಯಕ ಅವರು ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಟಿ. ಸುರೇಶ್‌ಕುಮಾರ್ ಮಾತನಾಡಿ, ಕೋವಿಡ್ ಕೇರ್ ಸೆಂಟರ್ ನಲ್ಲಿನ ಸಣ್ಣಪುಟ್ಟ ಸಮಸ್ಯೆಗಳನ್ನುತ್ವರಿತವಾಗಿ ಪರಿಹರಿಸಲಾಗುವುದು. ಸೋಂಕಿತರಿಗೆ. ಹೌಷಧಿ, ಊಟ, ಉಪಹಾರ, ಮಾಸ್ಕ್, ಸ್ಯಾನಿಟೈಜರ್, ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳು ಪೂರೈಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ ಜಿ.ಬಿ. ಉಮೇಶ್, ಪ.ಪಂ ಅಧ್ಯಕ್ಷ ಪಿ. ಲಕ್ಷ್ಮಣ, ಬಿಜೆಪಿ ಮಂಡಲಾಧ್ಯಕ್ಷ ಡಾ| ಪಿ.ಎಂ. ಮಂಜುನಾಥ, ತಾ.ಪಂ ಇಓ ಜಾನಕಿರಾಮ್, ತಾಲೂಕು ಆರೋಗ್ಯಾಧಿಕಾರಿಗಳು ಡಾ| ಸುಧಾ, ಪ.ಪಂ ಮುಖ್ಯಾಧಿಕಾರಿ ಕಾಂತರಾಜ್ ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend