ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ (ಜೂ.5) ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಕೃತಿ ಮಾತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಮೊಳಕಾಲ್ಮೂರು ಟೌನ್ ಜವಾಹರ್ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಸಸಿ ನೆಟ್ಟರು. ಈ ವೇಳೆ ಜನಪ್ರಿಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಡಾ” ದಾದಾಪೀರ್ ಎನ್.ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ದರ್ಶನ್, ಪ್ರಧಾನ ಕಾರ್ಯದರ್ಶಿಯಾದ ಮೆಹಬೂಬ್ ಬಾಷ, ಬ್ಲಾಕ್ ಮಾಜಿ ಅಲ್ಪಸಂಖ್ಯಾತರ ಅಧ್ಯಕ್ಷರಾದ ಜಿಯಾವುಲ್ಲಾ, ಮುಖಂಡರಾದ ಚೌಡಪ್ಪ, ಕಿರಣ, ಯುವ ಮುಖಂಡರಾದ ದುರ್ಗಪ್ಪ, ಮಾಲಿಕ್, ಜಾಫರ್, ಪವನ್, ಸುಧೀರ, ಭಾಗವಹಿಸಿದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030