ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 150 ರ ರಾಯಪುರ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿರುವ ಸೇತುವೆ ಅವೈಜ್ಞಾನಿಕವಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ರಾಯಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಸೇತುವೆ ಮಳೆ ಬಂದರೆ ನೀರು ಚರಂಡಿ ವ್ಯವಸ್ಥೆ ಇಲ್ಲದೆ ಸರಾಗವಾಗಿ ಹರಿಯದ ಕಾರಣ, ಮನೆ ಹಾಗೂ ಅಂಗಡಿ ಮುಂಗಟ್ಟುಗಳಿಗೆ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ, ಸುಡುಗಾಡು ಸಿದ್ದರ ಸಮುದಾಯದ ಅಲೆಮಾರಿ ನಿವಾಸಿಗಳ ಮನೆಗಳಿಗೆ ನೀರು ನುಗ್ಗುವುದರಿಂದ, ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕೂಡಲೇ, ಚರಂಡಿ ವ್ಯವಸ್ಥೆ ಮಾಡಿಸಿ, ಇಲ್ಲಿ ವಾಸ ಮಾಡುತ್ತಿರುವ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ವರದಿ.ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030