ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಸಿಲುಕಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವ ರೋಗಿಗಳಿಗೆ ಹಾಗೂ ಅವರ ಸಹಾಯಕರಿಗೆ ಮೊಳಕಾಲ್ಮುರಿನ ಮಂಚಿ ಮಾರುತಿ ಅವರು ಗುರುವಾರ ರಾತ್ರಿ ಅನ್ನ, ಸಾಂಬಾರ್ ಹಾಗೂ ಮೊಟ್ಟೆಯನ್ನು ನೀಡಿ, ಮಾನವೀಯತೆ ಮೆರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡುತ್ತಿದ್ದಂತೆ, ಹೋಟೆಲ್ ಗಳು ಬಂದ ಮಾಡಿದ ಹಿನ್ನೆಲೆಯಲ್ಲಿ, ಊಟ, ಉಪಹಾರ ಸಿಗದ ಕಾರಣ, ಜನರು ಹಸಿವಿನಿಂದ ಬಳಲಬಾರದು ಎನ್ನುವ ಹಿತದೃಷ್ಟಿಯಿಂದ, ಜನರಿಗೆ ಊಟ ನೀಡುತ್ತಿದ್ದಾರೆ.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030