ಮೊಳಕಾಲ್ಮೂರು: ಮಾನಸಿಕ ಅಸ್ವಸ್ಥನನ್ನು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿದ ಅಧಿಕಾರಿಗಳು.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ಕಳೆದ ಒಂದು ವರ್ಷದಿಂದ ಪಟ್ಟಣದ ಬೀದಿಯಲ್ಲಿ, ಕಾಲು ನೋವಿನಿಂದ ಬಳಲುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅರೆ ಹುಚ್ಚನ ಅಲೆದಾಟ ನಿರಾಶ್ರಿತರ ಕೇಂದ್ರಕ್ಕೆ ಸೇರಿಸುವಂತೆ ಜನರ ಒತ್ತಾಯ ಎನ್ನುವ ತಲೆಬರಹದಡಿ ಶುಕ್ರವಾರ ರಂದು ಎಚ್ಚರಿಕೆ ವಾರಪತ್ರಿಕೆಯಲ್ಲಿ ವರದಿ ಮಾಡಲಾಗಿತ್ತು. ವರದಿಯಿಂದ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಎಸ್ಐ ಬಸವರಾಜ್, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಪಿ. ಲಕ್ಷ್ಮಣ್ ಅವರು ಇಂದು ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಕರೆದೊಯ್ದು, ಕಾಲಿಗೆ ಚಿಕಿತ್ಸೆ ಕೊಡಿಸಿ ನಂತರ, ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದ ನಂತರ, ಇಂದು ರಾತ್ರಿ ಆಂಬುಲೆನ್ಸ್ ಮೂಲಕ, ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿಕೊಡುವ ಮೂಲಕ, ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ವರದಿ.ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend