ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ನಡೆದಿದ್ದ ಬೈಕ್ ಅಪಘಾತದಲ್ಲಿ, ಮತ್ತೋರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದೆರಡು ದಿನಗಳ ಹಿಂದೆ, ಮೂವರು ವ್ಯಕ್ತಿಗಳು ಬೈಕ್ ನಲ್ಲಿ ಸ್ವಗ್ರಾಮ ಕೋನ ಪುರಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿ 150ರ ಬೊಮ್ಮಕ್ಕನಹಳ್ಳಿ ಬಳಿ, ಬೈಕ್ ಲಾರಿ ಡಿಕ್ಕಿ ಹೊಡೆದು, ಸ್ಥಳದಲ್ಲಿ ಕೋನಾಪುರ ಗ್ರಾಮದ ನಾಗರಾಜ್ ಎನ್ನುವ ವ್ಯಕ್ತಿ ಸಾವಿಗೀಡಾಗಿದ್ದ, ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಹಾಗೂ ಬಜ್ಜಪ್ಪ ಎನ್ನುವ ಗಾಯಾಳುಗಳನ್ನು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸುರೇಶ್ (35) ಸಾವನ್ನಪ್ಪಿದ್ದಾನೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030