ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದಲ್ಲಿ ಆಹಾರ ಕಿಟ್ ಪಡೆಯುಲು ನಿಯಮ ಉಲ್ಲಂಘಿಸಿದ ಕಾರ್ಮಿಕರು. ಕೊರೋನಾ ಲಾಕ್ ಡೌನ್ ಸಂಕಷ್ಟದಲ್ಲಿ ಬಳಲಿದ್ದ ಪಟ್ಟಣದ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯಗಳ ಕಿಟ್ಗಳನ್ನು ವಿತರಿಸಲಾಯಿತು. ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಕಾರ್ಮಿಕ ಇಲಾಖೆಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 600 ಕ್ಕೂ ಹೆಚ್ಚಿನ ಕಾರ್ಮಿಕರು ಕಿಟ್ ಗಳನ್ನು ಪಡೆದರು. ಆಹಾರ ಪದಾರ್ಥಗಳ ಕಿಟ್ಗಳನ್ನು ನೀಡುತ್ತಾರೆನ್ನುವ ಸುದ್ದಿಯಿಂದಾಗಿ ನೂರಾರು ಸಂಖ್ಯೆಯಲ್ಲಿ ಸಾಮಾರ್ಥ್ಯ ಸೌಧದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಜಮಾಯಿಸಿದ್ದರು. ಇದರಿಂದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಕಾರ್ಮಿಕರು ಮಾಸ್ಕ್ ಧರಿಸಿದ್ದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸಾಲು ಗಟ್ಟಿ
ನಿಂತಿದ್ದರು. ಕಾರ್ಮಿಕರು ನೂಕು ನುಗ್ಗಲಿನಲ್ಲಿ ಆಹಾರ ಪದಾರ್ಥಗಳ ಕಿಟ್ಗಳನ್ನು ಪಡೆದರು. ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕಿ ಕುಸುಮಾ, ಕಾರ್ಮಿಕ ಮುಖಂಡ ಜಾಫರ್ ಷರೀಫ್, ರುದ್ರಪ್ಪ ಇದ್ದರು..
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030