ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ (ಜು,20) ಹಿರೇಕೆರೆಹಳ್ಳಿಯಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಡೆಂಘಿ ಮಲೇರಿಯಾ ಮಾಸಾ ಚರಣೆ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷೆ ಪಾಪಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿ, ಆರೋಗ್ಯ ಮತ್ತು ಆಶಾಕಾರ್ಯಕರ್ತರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ನೀರಿನ ತೊಟ್ಟಿಗಳು ವಾರ ಕ್ಕೊಮ್ಮೆ ಸ್ವಚ್ಛ ಗೊಳಿಸಬೇಕು. ಬಳಸಿದ ನೀರು ಹಿಂಗುವಂತೆ ಕ್ರಮ ಕೈಗೊಳ್ಳಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಬೇಕು. ಮನೆಯ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟು ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಬೇಕೆಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರಮೇಶ್, ಸದಸ್ಯರಾದ ವೀರನಗೌಡ, ಶಿವಣ್ಣ, ಸಂಜೀವ ಮೂರ್ತಿ, ಲಕ್ಷ್ಮಣ, ಬಸಪ್ಪ, ಹಿರಿಯ ಆರೋಗ್ಯಾಧಿಕಾರಿ ಮಾರುತಮ್ಮ, ನಿರೀಕ್ಷಣಾಧಿಕಾರಿ ಜಿ.ಟಿ.ಕುಮಾರ್, ಶಾಂತಕುಮಾರ್, ರಾಘವೇಂದ್ರ, ಶಿಲ್ಪ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030