ಮೊಳಕಾಲ್ಮೂರು: ತಾಲೂಕು ಕಚೇರಿಯಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು (ಜು,24) ತಾಲೂಕು ಆಡಳಿತ ಹಾಗೂ ಸಮಾಜದ ಮುಖಂಡರ ನೇತೃತ್ವದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಸರಳ ಸಂಕೇತವಾಗಿ ಆಚರಣೆ ಮಾಡಲಾಯಿತು. ಶಿವಶರಣ, ವಚನಕಾರ ಶ್ರೀ ಹಡಪದ ಅಪ್ಪಣ್ಣನವರ ತತ್ವಾದರ್ಶಗಳು ಪ್ರಸ್ತುತ ಸಮಾಜಕ್ಕೆ ಪೂರಕವಾಗಿದ್ದು, ಸರ್ವರೂ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು, 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿದ್ದರು. ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದರು. ಅವರು ರಚಿಸಿದ್ದ 200ಕ್ಕೂ ಹೆಚ್ಚು ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಾಸಿಲ್ದಾರ್ ಟಿ. ಸುರೇಶ್ ಕುಮಾರ್ ಅವರು ಹೇಳಿದರು.  ಈ ಕಾರ್ಯಕ್ರಮದಲ್ಲಿ , ತಾಲೂಕ್ ಸಿಬ್ಬಂದಿಗಳಾದ ಮಲ್ಲಿಕಾರ್ಜುನ್, ರಂಗನಾಥ್, ವಾಲಿಕರ್, ರಮೇಶ್, ಹಾಗೂ ಸಮಾಜದ ಮುಖಂಡರಾದ ಮಂಜುನಾಥ್, ಈಶ್ವರಯ್ಯ, ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend