ಚಿತ್ರದುರ್ಗ: ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಿಸಿದರು. ಮಾನ್ಯ ಬಿ.ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಆಯ್ಕೆ ಆಗಿದ್ದಕ್ಕೆ ಇಂದು (ಜು,28) ರಾಂಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಯುವ ಬಿಜೆಪಿ ಮುಖಂಡರಾದ ಎನ್.ವೈ. ಚೇತನ್, ಹಾಗೂ ಮಂಡಲದ ಪ್ರಧಾನಕಾರ್ಯದರ್ಶಿ ಪರಮೇಶ್ವರಪ್ಪ, ಯುವ ಮೋರ್ಚಾದ ಅಧ್ಯಕ್ಷ ಹರೀಶ್, ಶಿವು ಮತ್ತು ಎಸ್ಸಿ ಮೋರ್ಚಾದ ಪದಾಧಿಕಾರಿಗಳಾದ ಬಲರಾಮ, ಗಂಗಾಧರ, ಚಂದ್ರ, ಬಸವರಾಜ, ಜಿರಳ್ಳಿ ತಿಪ್ಪೇಸ್ವಾಮಿ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030