ಚಿತ್ರದುರ್ಗ: ಮೊಳಕಾಲ್ಮೂರು ಪಟಣ್ಣದ ತಾಲೂಕು ಕಚೇರಿಯಲ್ಲಿ 75 ನೇ ಸ್ವಾತಂತ್ರ ದಿನಾಚರಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ತಾಸಿಲ್ದಾರ್ ಟಿ. ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಸಾಂಕೇತಿಕವಾಗಿ ಆಚರಿಸಲಾಗುವುದು ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರತರಾದ ಉತ್ತಮ ನೌಕರರಿಗೆ 50 ಜನಕ್ಕೆ ಸನ್ಮಾನ, ರಾಂಪುರ ಹೋಬಳಿ ಹಾಗೂ ಕಸಬಾ ಹೋಬಳಿಯ ಇಬ್ಬರಿಗೆ ಸನ್ಮಾನ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಯ ನೌಕರರಿಗೆ ಸನ್ಮಾನ ತಾಲ್ಲೂಕಿನ ಇಬ್ಬರು ಪತ್ರಕರ್ತರಿಗೆ ಸನ್ಮಾನ ಮಾಡಲಾಗುವುದು ಎಂದು ಸಭೆಯಲ್ಲಿ ಮಾತನಾಡಿದರು. ಹೀಗೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಜಾನಕಿರಾಮ್, ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ. ಪಿ.ಎಂ ಮಂಜುನಾಥ, ಪ.ಪಂ ಅಧ್ಯಕ್ಷರಾದ ಪಿ ಲಕ್ಷ್ಮಣ, ಬಿ ಒ ಯುವರಾಜ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಚಿದಾನಂದ, ಟಿ.ಎಚ್.ಒ ಸುಧಾ, ಸಿ.ಡಿ.ಪಿ.ಓ ಸವಿತಾ, ಸಬ್ ಇನ್ಸ್ಪೆಕ್ಟರ್ ಬಸವರಾಜ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಬಿ.ಓಬಣ್ಣ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಹಾಗೂ ಸಂಘಟನೆಯ ಪದಾಧಿಕಾರಿಗಳು ಮುಖಂಡರುಗಳು ಉಪಸ್ಥಿತರಿದ್ದರು..
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030