ಕೊಂಡ್ಲಹಳ್ಳಿ ಕ್ಷೇತ್ರದಲ್ಲಿ ನೂತನ ಗ್ರಾ.ಪಂ ಸದ್ಯಸರು ಮತ್ತು ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ.!!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದ ಬಿಳಿ ನೀರು ಚಿಲುಮೆ ಕ್ಷೇತ್ರದಲ್ಲಿ ಶನಿವಾರ ಕ್ಷೇತ್ರ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರ ಆಶೀರ್ವಾದದಿಂದ ಪಂಚಾಯಿತಿ ಸದಸ್ಯರಾಗಿರುವ ನೀವುಗಳು ಹಳ್ಳಿಗಳಲ್ಲಿ ಜನರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕತೆಯಿಂದ ಆಡಳಿತ ನಡೆಸಬೇಕು. ನಿಮ್ಮ ಕಾರ್ಯವೈಖರಿ ಯಿಂದ ಕ್ಷೇತ್ರದಲ್ಲಿ ಪಕ್ಷ ಇನ್ನಷ್ಟು ಗಟ್ಟಿ ಯಾಗಲಿದೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಗ್ರಾಪಂ ಸದಸ್ಯರು ಹಳ್ಳಿಗಳ ಅಭಿವೃದ್ಧಿಯಲ್ಲಿ ಪಕ್ಷದ ವರ್ಚಸ್ಸಿಗೆ ದಕ್ಕೆಯಾಗದಂತೆ ಪ್ರಾಮಾಣಿಕತೆಯಿಂದ ಆಡಳಿತ ನೀಡಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿ ಸುವಮೂಲಕ ಬರುವ ದಿನಗಳಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಯಾರ ಒತ್ತಡಗಳಿಗೂ ಮಣಿ ಯದೆ ಪ್ರಾಮಾಣಿಕತೆಯಿಂದ ಆಡಳಿತ ನೀಡುವ ಮೂಲಕ ಉತ್ತಮ ಹೆಸರನ್ನು ಸಂಪಾದಿಸಿ ಕೊಂಡು ಬರುವ ತಾಲೂಕು ಮತ್ತು
ಜಿ.ಪಂಗಳನ್ನು ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದರು. ಪ್ರಸ್ತುತ ರಾಜ್ಯದಲ್ಲಿ ಶೇ.50ರಷ್ಟು ಮಹಿಳೆಯರು ಗ್ರಾಪಂ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಮಹಿಳೆಯರು ಹೆಚ್ಚು ರಾಜಕೀಯವಾಗಿ ಮುಂದೆ ಬರಬೇಕು. ಜನರ ಆರ್ಶೀವಾದದಿಂದ ಆಯ್ಕೆಗೊಂಡಿರುವ ನಿಮ್ಮ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಅಧಿಕಾರ ಸಿಕ್ಕಿದೆ ಎನ್ನುವ ಭ್ರಮೆ ಬಿಟ್ಟು ಹಳ್ಳಿಗಳ ಅಭಿವೃದ್ಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಪ್ರಾಮಾಣಿಕತೆಯಿಂದ ಆಡಳಿತ ನಡೆಸಿ ಉತ್ತಮ ಹೆಸರು ಸಂಪಾದಿಸಿಕೊಳ್ಳಬೇಕೆಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಅನೇಕ ಯೋಜನೆಗಳ ಮೂಲಕ ಕೋಟ್ಯಂತರ ರೂಪಾಯಿ ನೀಡುತ್ತಿದ್ದಾರೆ. ಬರುವ ಅನುದಾನಗಳು ದುರ್ಬಳಕೆಯಾಗದಂತೆ ಎಚ್ಚರ ವಹಿಸಬೇಕು. ಆಯಾ ಯೋಜನೆಯನು ದಾನಗಳನ್ನು ಸಮಸ್ಯೆ ಇರುವ ಪ್ರದೇಶಗಳಿಗೆ ತಲುಪಿಸಬೇಕು. ತುಂಗಭದ್ರ ಹಿನ್ನೀರಿನ ಯೋಜನೆ ಶೇ.90ರಷ್ಟು ಕಾಮಗಾರಿ ಮುಗಿದಿದೆ. ಕೆಲವೇ ತಿಂಗಳಲ್ಲಿ ಕ್ಷೇತ್ರದಎಲ್ಲ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿ ಸಲು ಕ್ರಮ ಕೈಗೊಳ್ಳುತ್ತೇನೆ ಎಂದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್ ನವೀನ್ ಮಾತನಾಡಿದರು. ಮಂಡಲ ಮಾಜಿ ಅಧ್ಯಕ್ಷ ಟಿ.ರೇವಣ್ಣ ಮಾತನಾಡಿದರು. ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ, ರಾಮರೆಡ್ಡಿ, ಜಿಲ್ಲಾಧ್ಯಕ್ಷ ಮುರಳಿ, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಜಿ.ಟಿ, ಸುರೇಶ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮಣ, ನಾಯಕನಹಟ್ಟಿ ಮಹಂತೇಶ, ರಾಮದಾಸ್, ಮಹಂತೇಶ ನಾಯಕ, ಟಿ.ಮಂಜುನಾಥ, ಪಿ.ಇ.ವೆಂಕಟಸ್ವಾಮಿ, ಜಿ.ಪಂ ಸದಸ್ಯ ಓಬಳೇಶ, ತಾ.ಪಂ ಸದಸ್ಯ ನರೇಂದ್ರ ಬಾಬು, ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಲ್.ಪರಮೇಶ, ಪ್ರಭು,ಎಂ.ಈಶ್ವರಪ್ಪ ಮೋಹನ್, ಡಿ.ಆರ್.ಬಸವರಾಜ, ಬಿಜೆಪಿಯ ಮುಖಂಡರುಗಳು ಹಾಗೂ ತಾಲೂಕಿನ ಗ್ರಾಮಸ್ಥರು ಉಪಸ್ಥಿತರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend