ಕೊಂಡ್ಲಹಳ್ಳಿ: ಶ್ರೀಅಭಯ ಆಂಜನೇಯಸ್ವಾಮಿ ರಥೋತ್ಸವ ಸಂಭ್ರಮ..!!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದಲ್ಲಿ ಶ್ರೀಅಭಯ ಆಂಜನೇಯಸ್ವಾಮಿ ರಥೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ರಥೋತ್ಸವದ ಅಂಗವಾಗಿ ರುದ್ರಾಭಿಷೇಕ, ಹೋಮ, ಹವನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಟಾಪಿಸಿ ಬಲಿ ಅನ್ನ ಸಮ ರ್ಪಣೆಯೊಂದಿಗೆ ವಿವಿಧ ಜನಪದ ಕಲಾತಂಡಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಾನಾ ಬಗೆಯ ಹೂವಿನ ಅಲಂಕೃತವಾದ ರಥವನ್ನು ಪ್ರಮುಖ ಬೀದಿಗಳಲ್ಲಿ ಎಳೆದೊಯ್ಯಲಾಯಿತು. ರಥೋತ್ಸವದ ಉದ್ದಕ್ಕೂ ಭಕ್ತರು ಬಾಳೆ ಹಣ್ಣು, ಚೂರು ಬೆಲ್ಲ ಎರಚಿ ಭಕ್ತಿ ಸಮರ್ಪಿಸಿದರು. ರಥ ಸಾಗುವ ರಸ್ತೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಗೊಂಬೆ ಕುಣಿತ, ಕೀಲು ಕುದುರೆ ಸೇರಿದಂತೆ ವಿವಿಧ ಜನಪದ ಕಲಾ ತಂಡಗಳು ಗಮನ ಸೆಳೆದವು. ಸುತ್ತಲಿನ ಗ್ರಾಮ ಸೇರಿದಂತೆ ಆಂಧ್ರದ ವಿವಿಧ ಭಾಗಗಳ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend