ಕರ್ನಾಟಕ ಧ್ವಜ ಸುಟ್ಟು ಪುಂಡರ ಮೇಲೆ ಸೂಕ್ತ ಕ್ರಮಕ್ಕೆ ಕರವೇ ಮನವಿ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು: ಕರ್ನಾಟಕದ ಧ್ವಜವನ್ನು ಸುಟ್ಟುಹಾಕಿ ಅಪಮಾನ ಗೊಳಿಸಿದ ಶಿವಸೇನೆ ಮತ್ತು ಎಂಇಎಸ್ ಪುಂಡರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ದಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ಕರ್ನಾಟಕ ರಾಜ್ಯದ ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ದಕ್ಕೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರಶಿವ ಸೇವೆ ಮತ್ತು ಎಂ ಇ ಸ್ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ಕನ್ನಡದ ಧ್ವಜವನ್ನು ಸುಟ್ಟು ಹಾಕುವ ಮೂಲಕ ನೂರಾರು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಮಹಾರಾಷ್ಟ್ರ ಸರ್ಕಾರವು ಕುಮ್ಮಕ್ಕು ನೀಡುತ್ತಿದೆ.
ಇದನ್ನು ಮೊಳಕಾಲ್ಮೂರು ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣ ಖಂಡಿಸುತ್ತದೆ. ಇದೇ ರೀತಿ ಕರ್ನಾಟಕ ರಾಜ್ಯೋತ್ಸವ ದಿನದಂದು ಹಾಗೂ ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಕಪ್ಪು ಬಟ್ಟೆ ಧರಿಸಿ ನಾಡಿಗೆ ಅವಮಾನಿಸುವುದು ಮತ್ತು ಕನ್ನಡ ನಾಮಫಲಕಗಳನ್ನು ದಂಸ್ವ ಗಳಿಸುವುದು. ಕನ್ನಡನಾಡಿನ ಧೀಮಂತ ನಾಯಕರು ಮತ್ತು ಕವಿಗಳಿಗೆ ಅವಮಾನಿಸುವುದು ಈ ರಿತಿ ಕನ್ನಡಿಗರ ತಾಳ್ಮೆಯನ್ನು ಕೆಣಕುವಂತೆ ಆಗುತ್ತಿದೆ. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಮಂಜುನಾಥ್ ತಾಲೂಕು ಅಧ್ಯಕ್ಷರಾದ ಚಿಕ್ಕೆರಹಳ್ಳಿ ಮಹೇಶ್ ಪ್ರಧಾನ ಕಾರ್ಯದರ್ಶಿ ಎಸ್ ಮಂಜುನಾಥ್, ಮಾರಣ್ಣ, ಗ್ರಾ.ಪಂ ಉಪಾಧ್ಯಕ್ಷ ಪಿ ಪಾಲಯ್ಯ, ಸುರೇಶ್, ಹೊನ್ನೂರ್ ಸ್ವಾಮಿ, ನೀಲಕಂಠ, ರಾಜಕುಮಾರ್, ಸುರೇಶ ಮುಂತಾದವರು ಉಪಸ್ಥಿತರಿದ್ದರು…
ವರದಿ. ಮಂಜುನಾಥ್, ಎಚ್,
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030