ಚಿತ್ರದುರ್ಗ: ಮೊಳಕಾಲ್ಮುರು ರಸ್ತೆ ದಾಟುತ್ತಿದ್ದವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ತಾಲೂಕಿನ ಹಾನಗಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿಗೆ ವೇಗವಾಗಿ ತೆರಳುತ್ತಿದ್ದ ಸ್ವಿಫ್ಟ್ ಕಾರು ರಸ್ತೆ ದಾಟುತ್ತಿದ್ದ ಕರಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕರಡಿ ಸ್ಥಳದಲ್ಲೇ ಮೃತಪಟ್ಟಿದೆ. ಘಟನೆಗೆ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದ್ದು, ಈ ಸಂಬಂಧ ಕಾರು ಚಾಲಕ ಗುಬ್ಬಿ ತಾಲೂಕಿನ ಕೊಡುಗೆಹಳ್ಳಿ ಗ್ರಾಮದ ಕುಮಾರಸ್ವಾಮಿ ಎಂಬುವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಿದ್ದಾರೆ. ಬಳಿಕ ನ್ಯಾಯಾಧೀಶರ ಆದೇಶದಂತೆ ಮೃತ ಕರಡಿಯ ಶವ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಅರಣ್ಯಾಧಿಕಾರಿ ನಾಗೇಂದ್ರ ನಾಯಕ ತಿಳಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಸ್ಥಳದಲ್ಲಿ ಎಸಿಎಫ್ ಮಂಜುನಾಥ, ಉಪವಲಯ ಅರಣ್ಯಾಧಿಕಾರಿ ಹಸನ್ಬಾಷ, ಅರಣ್ಯ ರಕ್ಷಕರಾದ ಚಾಂದ್ ಬಾಷ, ಶಿವರಾಜ್, ಸುನಿಲ್ ಇದ್ದರು.
ವರದಿ. ಮಂಜುನಾಥ್. ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030