ಮೊಳಕಾಲ್ಮೂರು: ಸ್ಟೇಡಿಯಂ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಸ್ಥಳ ಪರಿಶೀಲನೆ: ಸಂಸದ ನಾರಾಯಣಸ್ವಾಮಿ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು / (ಜೂ.7) ತಾಲೂಕಿನಲ್ಲಿ ಕೊರೋನಾ ಮಹಾಮಾರಿಗೆ ಸಿಲುಕಿ ಜೀವನ ಸಾಗಿಸುವುದೇ ಕಷ್ಟಕರವಾಗಿರುವ ಸಂದರ್ಭದಲ್ಲಿ, ಮೊಳಕಾಲ್ಮುರು ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ, ಸಂಸದ ನಾರಾಯಣಸ್ವಾಮಿ ಅವರು ಸುಮಾರು 35ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಅದೆ ರಿತಿ ಆಟೋ ಚಾಲಕರಿಗೂ ಸುಮಾರು 100ಕಿಟ್ ಕೊಡಲಾತು .ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆ ಕಾಲೇಜ್ ಅವರಣದಲ್ಲಿ, ಸ್ಟೇಡಿಯಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಶೀಘ್ರದಲ್ಲೇ ಮಂಜೂರಾತಿ ಮಾಡಿಸಲಾಗುವುದು.  ತಾಲೂಕಿನಲ್ಲಿ ಕೆ. ಎಸ್. ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗಿದ್ದು, ಲಾಕ್ ಡೌನ್ ಮುಗಿದನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಒಂದನೇ ಸಮರ್ಪಕವಾಗಿ ಎದುರುಸಿದ್ದು, ಎರಡನೇ ಅಲೆಯಲ್ಲೂ, ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಯಾವುದೇ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾವಬ್ಬ ಶಾಸಕರಿಗೂ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳುವ ನೈತಿಕತೆ ಇಲ್ಲ. ಸುಮಾರು40- 50 ವರ್ಷಗಳ ಕಾಲ ಪುರಸಭೆ ಸದಸ್ಯನಿಂದ ಹಿಡಿದು, ಶಾಸಕರಾಗಿ, ಪಕ್ಷದ ಅಧ್ಯಕ್ಷರಾಗಿ 4 ಬಾರಿ ಮುಖ್ಯಮಂತ್ರಿಗಳಾಗಿ ಪಕ್ಷದಲ್ಲಿ ದುಡಿದಿದ್ದಾರೆ ಮುಂದಿನ ವಿಧಾನಸಭಾ ಚುನಾವಣೆ ವರೆಗೂ ಬಿಎಸ್ ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ಮಂಡಲ ಅಧ್ಯಕ್ಷರಾದ ಡಾ|| ಪಿ.ಎಂ ಮಂಜುನಾಥ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕಾಂತ್‍ರಾಜ್ ಅಧ್ಯಕ್ಷರಾದ ಲಕ್ಷ್ಮಣ್, ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು ಪೌರ ಕಾರ್ಮಿಕರು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend