ಯಾವುದೇ ಕೊರತೆ ಇಲ್ಲ, ಜನ ಆತಂಕಕ್ಕೆ ಒಳಗಾಗುವುದು ಬೇಡ.! ಆಮ್ಲಜನಕ ಶೇಖರಿಸಿಡಲಾಗಿದೆ. ಸಚಿವ ಶ್ರೀರಾಮುಲು.!!

Listen to this article

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ಆಮ್ಲಜನಕ ಸೇರಿ ಯಾವುದೇ ಕೊರತೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ಕೊರತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಚಾರ. ಇವತ್ತೇ ಆಸ್ಪತ್ರೆಗಳಿಗೆ ಭೇಟಿ ನೀಡಿ ವೈದ್ಯಕೀಯ ಸೌಲಭ್ಯ ಪರಿಶೀಲನೆ ನಡೆಸಿದ್ದೇನೆ. ಯಾವುದೇ ಕೊರತೆ ಇಲ್ಲ, ಜನ ಆತಂಕಕ್ಕೆ ಒಳಗಾಗುವುದು ಬೇಡ.! ನನ್ನ ಕ್ಷೇತ್ರ ಮೊಳಕಾಲ್ಮೂರಿನಲ್ಲಿ ಆಮ್ಲಜನಕದ ಕೊರತೆ ಇದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಗಮನಿಸಿದೆ. ಆದರೆ ಅಂತಹ ಯಾವುದೇ ಕೊರತೆ ಇಲ್ಲ. ಈಗಾಗಲೇ ಅಗತ್ಯಕ್ಕೆ ಅನುಗುಣವಾಗಿ ಆಮ್ಲಜನಕ ಶೇಖರಿಸಿಡಲಾಗಿದೆ. ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕೋವಿಡ್ ನ ಪರಿಣಾಮಕಾರಿ ನಿಯಂತ್ರಣ ಹಾಗೂ ತಡೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಸಂಕಷ್ಟ ಕಾಲದಲ್ಲಿ ವದಂತಿಗಳಿಗೆ ಕಿವಿ ಕೊಡದಿರಲು ಹಾಗೂ ಯಾವುದೇ ಸಮಸ್ಯೆ ಎದುರಾದಲ್ಲಿ ನಮ್ಮ ಕಛೇರಿ ಅಥವಾ ಜಿಲ್ಲಾಡಳಿತವನ್ನು ಸಂಪರ್ಕಿಸಲು ಮನವಿ ಮಾಡುತ್ತೇನೆ..

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend