ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ (ಜು-19) 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗಾಗಿ ಸುರಕ್ಷತೆ ದೃಷ್ಟಿಯಿಂದ ರಾಂಪುರ ಗ್ರಾಮ ಪಂಚಾಯಿತಿ ವತಿಯಿಂದ ಎಸ್.ಎಲ್.ಎನ್.ಎಚ್.ಎಸ್ ಪ್ರೌಢಶಾಲೆ ಹಾಗೂ ಮುಕ್ತೇಶ್ವರ ಪ್ರೌಢಶಾಲೆ ಸೇರಿದಂತೆ ಪ್ರತಿಯೊಂದು ಪರೀಕ್ಷಾ ಕೇಂದ್ರದ ಮಕ್ಕಳಿಗೆ ಮತ್ತು ನಿಯುಕ್ತಿಗೊಂಡ ಸಿಬ್ಬಂದಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಎಲ್ ಪರಮೇಶ್ವರಪ್ಪ ಅವರು ಮಾತನಾಡಿದರು. ನಂತರ ಮಾತನಾಡಿದ ಅವರು ಕೋವಿಡ್ ಒಂದು ಮತ್ತು ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ನಮ್ಮ ದೇಶದ ಕೆಲವೆಡೆ ಮೂರನೇ ಅಲೆಯ ಭೀತಿಯು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ವಿತರಿಸಲಾಗಿದ್ದು, ಎಲ್ಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸರ್ಕಾರದ ಕರೋನಾ ನಿಯಮಗಳನ್ನು ಪಾಲಿಸುವುದರೊಂದಿಗೆ ನಿಭೀರ್ತರಾಗಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆದು ನಮ್ಮ ತಾಲೂಕಿಗೆ ಹೆಸರು ತರಬೇಕೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅಭಿವೃದ್ದಿ ಅಕಾರಿಗಳಾದ ಎನ್ ಗುಂಡಪ್ಪ ಅವರು, ಗ್ರಾ.ಪಂ ಸಿಬ್ಬಂದಿ ವರ್ಗದವರು, ಹಾಗೂ ಸುವಾಸ್, ಉಲ್ಲಾಸ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030