ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಕೈಹಿಡಿದ ಮತದಾರ…

Listen to this article

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈ ಫಲಿತಾಂಶವು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ನಗರ ಪ್ರದೇಶದ ಜನತೆ ಎಂದಿಗೂ ಕಾಂಗ್ರೆಸ್ ಪಕ್ಷದ ಪರವಿದ್ದಾರೆ ಎಂಬುದನ್ನು ಈ ಚುನಾವಣೆಯು ಎತ್ತಿಹಿಡಿದಿದೆ. ಇದೇ ರೀತಿಯ ಫಲಿತಾಂಶವು ಮುಂದಿನ ಚುನಾವಣೆಗಳಲ್ಲೂ ಕಂಡು ಬರುತ್ತದೆ ಎಂಬ ವಿಶ್ವಾಸ‌ ನನಗಿದೆ. ಇಂದು ಗೆಲುವು ಸಾಧಿಸಿರುವ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಈ ಗೆಲುವು ಜನಸೇವೆಗಾಗಿ ನಮಗೆ ಸಿಕ್ಕಿರುವ ಒಂದು ಅವಕಾಶ ಎಂಬುದನ್ನು ಯಾರೂ ಮರೆಯಬಾರದು ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಗೆಲುವಿನ ಸಂಭ್ರಮಾಚರಣೆ ಬದಲು, ನಿಮ್ಮನ್ನು ಗೆಲ್ಲಿಸಿದ ಜನರ ಸೇವೆಗಾಗಿ ಈ ಸಮಯವನ್ನು ಮೀಸಲಿಡಿ ಎಂದು ನಾನು ತಮ್ಮೆಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ.

ಈ ಚುನಾವಣಾ ಗೆಲುವಿಗೆ ಕಾರಣೀಭೂತರಾದ ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ನಮ್ಮ ಅಭ್ಯರ್ಥಿಗಳ ಮೇಲೆ ನಂಬಿಕೆಯಿಟ್ಟು, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಧನ್ಯವಾದಗಳನ್ನು ತಿಳಿಸಿದ್ದಾರೆ..

ವರದಿ. ಮಂಜುನಾಥ್ ದೊಡ್ಡಮನಿ ಹೊಸಪೇಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend