ಅಂಬೇಡ್ಕರ್ ಜಯಂತಿಯ ಅಂಗವಾಗಿ ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಹೊಸಪೇಟೆಯ ನಗರದಲ್ಲಿ, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಸುಜಾತಾ ಪಾಟೀಲ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಆಯುಷ್ ಇಲಾಖೆಯ ವಸ್ತು ಪ್ರದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ಆನಂದ್ ಸಿಂಗ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಹಾಗೂ ಅನೇಕ ಸಂಘ-ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಈ ವಸ್ತುಪ್ರದರ್ಶನದಲ್ಲಿ ಡಾಕ್ಟರ್ ಮುನಿ ವಾಸುದೇವರೆಡ್ಡಿ, ಡಾಕ್ಟರ್ ಗುರುಬಸವರಾಜ್, ಡಾಕ್ಟರ್ ಬಳಗಾನೂರು ಮಂಜುನಾಥ, ಡಾಕ್ಟರ್ ಬಿ ಎಸ್ ಕುಮಾರ್, ಡಾಕ್ಟರ್ ಶಿವಶರಣಯ್ಯ, ಡಾಕ್ಟರ್ ರೂಪ್ ಸಿಂಗ್ ರಾಥೋಡ್ ಮತ್ತು ಆಯುಷ್ ಇಲಾಖೆಯ ಸಿಬ್ಬಂದಿ ವರ್ಗದವರು ಅನುಪಮ ಸೇವೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ರೋಗನಿರೋಧಕ ಶಕ್ತಿ ವರ್ಧಕ ಆಯುಷ್ ಔಷಧಿಗಳನ್ನು ವಿತರಿಸಲಾಯಿತು. ಆಯುಷ್ ಇಲಾಖೆಯ ಸೇವೆಯ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು…
ವರದಿ.ಗಣೇಶ್. ಬಿ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030