ಕುರಿ, ಕೋಳಿ, ಮೀನಿನ ಬದಲು ಗೋಮಾಂಸ ಸೇವಿಸಿ ಎಂದು ಕರೆ ನೀಡಿದ ಬಿಜೆಪಿ ಸಚಿವ!
ಶಿಲ್ಲಾಂಗ್: ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತಲೂ ಹೆಚ್ಚು ಗೋಮಾಂಸ ಸೇವನೆ ಮಾಡಿ ಎಂದು ಎಂದು ಬಿಜೆಪಿಯ ಹಿರಿಯ ನಾಯಕ ಮೇಘಾಲಯ ಸಚಿವ ಸಣ್ಬೂರ್ ಶುಲ್ಲೈ ಜನರಿಗೆ ಸಲಹೆ ನೀಡಿದ್ದು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರ ಸೇವಿಸಲು ಸ್ವತಂತ್ರರು ಎಂದು ಅವರು ಹೇಳಿದ್ದಾರೆ.
ಪಶುಸಂಗೋಪನೆ ಮತ್ತು ಪಶು ವೈದ್ಯ ಖಾತೆ ಸಚಿವರಾಗಿರುವ ಸಣ್ಬೂರ್, ಮೇಘಾಲಯದಲ್ಲಿ ಬಿಜೆಪಿಯು ಗೋಮಾಂಸ ನಿಷೇಧ ಕಾನೂನನ್ನು ಜಾರಿಗೊಳಿಸುತ್ತದೆ ಎನ್ನುವ ಆತಂಕ ಇಲ್ಲ ಎನ್ನುವುದನ್ನು ತಿಳಿಸುವ ಉದ್ದೇಶದಿಂದ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ನೆರೆಯ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಆ ಹೊಸ ಕಾನೂನಿನಿಂದ ಮೇಘಾಲಯಕ್ಕೆ ಜಾನುವಾರು ಸಾಗಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಸಿಎಂ ಶಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ…
ವರದಿ. ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030