ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡೋಣ : ಗುರುದತ್ತ ಹೆಗಡೆ…!!!

Listen to this article

ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡೋಣ : ಗುರುದತ್ತ ಹೆಗಡೆ
ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಮತದಾರರು ಸಕ್ರಿಯವಾಗಿ ಮತದಾನ ಹಬ್ಬದಲ್ಲಿ ಭಾಗವಹಿಸಿ, ಯಾವುದೇ ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತದಾರರಿಗೆ ಕರೆ ನೀಡಿದರು.
ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ನಗರ ವ್ಯಾಪ್ತಿಯಲ್ಲಿ ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದು, ಈ ಬಾರಿ ಹಾಗಾಗದೇ ಎಲ್ಲರೂ ಸಕ್ರಿಯವಾಗಿ ಮತದಾನ ಮಾಡಬೇಕು. ಹಾಗೂ ಮತ ಹಾಕಲು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡೋಣ ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಶಿವಮೊಗ್ಗದಲ್ಲಿ ಶೇ.100 ರಷ್ಟು ಮತದಾನ ಮಾಡಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಯಾರು ಕೂಡ ಮತದಾನದಿಂದ ವಂಚಿತರಾಗುವುದು ಬೇಡವೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಳಾದ ಸಿ ಎಸ್ ಗಾಯತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ್, ಜಾಗೃತ ಮತದಾರರ ವೇದಿಕೆಯ ಕೆ.ಸಿ. ಬಸವರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೇಜ್, ಸಾರ್ವಜನಿಕರು, ಭಾಗವಹಿಸಿದ್ದರು…

ವರದಿ. ಸುರೇಶ್, ಶಿವಮೊಗ್ಗ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend