ಸಿಂಧನೂರು : ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ರಸ್ತೆ ತಡೆದು ದಿಡೀರ್ ಪ್ರತಿಭಟನೆ,
ರಾಮನಗರದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಅಮರೇಗೌಡ ವಿರುಪಾಪುರು ಡಾ.ಬಿ.ಆರ್. ಅಂಭೇಡ್ಕರರವರ ಪುತ್ಥಳಿ ಅನಾವರಣ ಸಂದರ್ಭದಲ್ಲಿ ಈ ರೀತಿ ಗುಂಡಾ ವರ್ತನೆ ತೋರಿಸಿದ್ದು ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂತದ್ದು ಎಂದು ತೋರಿಸುತ್ತದೆ.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ರೌಡಿಸಂ,ಗುಂಡಾವರ್ತನೆ ನಡೆಯುವುದಿಲ್ಲ ಎಂದರು.
ಸರ್ಕಾರದ ಕಾರ್ಯಕ್ರಮದಲ್ಲಿ ಡಿಕೆ ಡಿಕೆ ಎಂದು ಕೂಗಿದರೆ ಇದು ಪೂರ್ವನಿಯೋಜಿತ ಅಲ್ಲವೇ? ಕೂಡಲೇ ಡಿ.ಕೆ. ಸುರೇಶ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ನಮ್ಮ ದೇಶದಲ್ಲಿ ಶಾಸನಾತ್ಮಕವಾಗಿ ರಚನೆಯಾದ,ಪ್ರದಾನಮಂತ್ರಿ,ಮುಖ್ಯಮಂತ್ರಿ, ಶಾಸಕರಿಗೆ, ಸಚಿವರಿಗೆ ಯಾರು ಅಗೌರವ ತೋರಿಸಬಾರದು. ಆದರೆ ಕಾಂಗ್ರೆಸ್ ಪಕ್ಷದ ಸಂಸದರೊಬ್ಬರು ಸಚಿವರಿಗೆ ತೋರಿಸಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ನಶಿಸಿಹೋಗಿದೆ ಕರ್ನಾಟಕದಲ್ಲಿ ಅಲ್ಪಸ್ವಲ್ಪ ಉಳಿದುಕೊಂಡಿದೆ ಆದು ಡಿಕೆ. ಬ್ರದರ್ಸ್ ರಿಂದ ನಶಿಸಿ ಹೋಗುತ್ತದೆ.ಡಿಕೆ ಬ್ರದರ್ಸ ಮೂಲೆಗುಂಪಾಗುವುದು ಶತಸಿದ್ಧ ಎಂದು ಮದ್ವರಾಜ್ ಆಚಾರ್ಯ ಮಾತನಾಡಿದರು. ಇನ್ನು ಬಿಜೆಪಿ ಕಾರ್ಯಕರ್ತರು ಡಿಕೆ ಸುರೇಶ್ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಡಿಕೆ ಬ್ರದರ್ಸ್ ಕಳ್ಳರು, ಗೂಂಡಾಗಳು ಎಂದು ಘೋಷಣೆ ಕೂಗಿದರು.ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎನ್. ಶಿವನಗೌಡ ಗೋರೆಬಾಳ, ಪರಮೇಶಪ್ಪ ಹಾದಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಟಿ.ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮಾ ಸಿದ್ಧಾಂತಿ ಮಠ ಹಾಗೂ ಗ್ರಾಮೀಣ ಮತ್ತು ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳು ಮೋರ್ಚಾ ಅಧ್ಯಕ್ಷರು ಪದಾಧಿಕಾರಿಗಳು ನಾಮನಿರ್ದೇಶಿತ ಸದಸ್ಯರು ಕಾರ್ಯಕರ್ತರು ಮುಂತಾದವರು ಭಾಗವಹಿಸಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030