ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬಿಕೊ ಎನ್ನುತ್ತಿರುವ ಸಿಂಧನೂರು ಬಸ್ ನಿಲ್ದಾಣ.
ಸಿಂಧನೂರು : ನಗರದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ದಿನಾಲು ಗಿಜಗಿನ ಗೂಡಿನತ್ತಿರತ್ತಿತ್ತು.ಆದರೆ ಬಾನುವಾರದಂದು ಬಸ್ ನಿಲ್ದಾಣ ಸ್ತಬ್ದವಾಗಿದೆ.ನಿತ್ಯ ನೂರಾರು ಸಾರಿಗೆ ಬಸ್ಗಳು ಸಂಚರಿಸುತ್ತಿದ್ದವು. ಆದ್ರೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ ತಾಲೂಕಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳು ಸಂಚರಿಸುತ್ತಿವೆ.ಕರ್ಫ್ಯೂ ಹಿನ್ನೆಲೆ ಜನರಿಲ್ಲದೇ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.ಪ್ರಯಾಣಿಸಲು ಸಂಚರಿಸುವ ಯಾವುದೇ ಬಸ್ ಸಂಚಾರಕ್ಕೆ ಅಡ್ಡಿಯಿಲ್ಲ. ಕರ್ಫ್ಯೂನಿಂದಾಗಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದೆ.ಇನ್ನು ವೀಕೆಂಡ್ ಕರ್ಫ್ಯೂ ಹಿನ್ನೆಲೆ ತಾಲೂಕಿನಾದ್ಯಂತ ಅಗತ್ಯ ವಸ್ತುಗಳು, ತುರ್ತು ಸೇವೆ ಹೊರತು ಪಡಿಸಿದಂತೆ ಉಳಿದೆಲ್ಲ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ನಗರದಲ್ಲಿ ಪೊಲೀಸನವರು ನಾನಾ ಕಡೆಗಳಿಗೆ ಬ್ಯಾರಿಕೇಡ್ ಹಾಕಿದ್ದಾರೆ.ನಿತ್ಯಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಸ್ಥರು ಮಾರುಕಟ್ಟೆಗೆ ಮಾರಾಟಕ್ಕೆ ಬಂದಿದ್ದು, ದಿನಂಪ್ರತಿ ನಡೆಯುವ ಹಾಗೆ ವ್ಯಾಪಾರ ನಡೆಯದೇ ಇರುವುದರಿಂದ ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿದೆ. ಸದ್ಯ ತಾಲೂಕಿನಾದ್ಯಂತ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಿದ್ದು, ಅಗತ್ಯ ಬಂದೋ ಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಾಲೂಕಾಡಳಿತ ನಗರಸಭೆ ಮತ್ತು ಪೊಲೀಸ್ ಇಲಾಖೆ ತಿಳಿಸಿದೆ…
ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030