ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ…!!!

Listen to this article

ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ.

ಸಿಂಧನೂರು : ಸೈನಿಕರು ಹಗಲಿರುಳು ಗಡಿಯಲ್ಲಿ ನಿಂತು ದೇಶ ರಕ್ಷಣೆ ಮಾಡುತ್ತಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ಯುವಕರು ದೇಶಪ್ರೇಮ ಬೆಳೆಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಬೇಕು. ಸೈನಿಕರ ಸೇವೆ ಸ್ಮರಿಸುವುದು ಪ್ರತಿಯೊಬ್ಬರು ಕರ್ತವ್ಯ,ಸೈನಿಕರು ವರ್ಷದ 365 ದಿನವೂ ದೇಶದ ಗಡಿ ಕಾಯುತ್ತಿರುವುದರಿಂದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿದೆ, ಅಂತಹ ಸೈನಿಕರನ್ನು ಸನ್ಮಾನಿಸುವುದು ನಮ್ಮ ಭಾಗ್ಯ ಎಂದು ಸೋಮನಗೌಡ ಬಾದರ್ಲಿ ಸನ್ಮಾನಿಸಿ ಮಾತನಾಡಿದರು. ಸೈನಿಕರಾದ ವೀರೇಶ ಸುಕಲ್ಪೇಟೆ 17 ವರ್ಷ ಸೇವೆ, ನಾಗರಾಜ್ ತುರುವಿಹಾಳ 19 ವರ್ಷ ಸೇವೆ, ಲಿಂಗನಗೌಡ ತಿಡಿಗೋಳ ಸಿಆರ್ ಪಿಎಫ್ ಕೋಬ್ರಾ ಕಮಾಂಡೋ ವಾಗಃ ಬಾರ್ಡರ್, ಮಹಮ್ಮದ್ ಸೈನಿಕರು ಹೈದರಾಬಾದ್ ಇವರನ್ನು ನಗರದ ಬಸನಗೌಡ ಬಾದರ್ಲಿರವರ ಕಾರ್ಯಾಲಯದಲ್ಲಿ ಆರ್‌.ಡಿ ಸಿ.ಸಿ ಬ್ಯಾಂಕಿನ ನೂತನ ನಿರ್ದೇಶಕರಾದ ಸೋಮನಗೌಡ ಬಾದರ್ಲಿಯವರು ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸನ್ಮಾನಿಸಿ, ಸಸಿಗಳನ್ನು ನೀಡುವುದರ ಮುಖಾಂತರ ಗೌರವಿಸಿದರು.

ಈ ಸಂದರ್ಭದಲ್ಲಿ ರೈತ ಮತ್ತು ಸೈನಿಕ ಸಂಘದ ಅಧ್ಯಕ್ಷರಾದ ಶ್ರೀ ಓಂಕಾರ್ ಅವರು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ರಾಗಲಪರ್ವಿ ಖಾಜಾಹುಸೇನ್ ರೌಡಕುಂದ ಹಾಗೂ ಇತರರು ಉಪಸ್ಥಿತರಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend