ಡೆಂಗ್ಯೋ ರೋಗದಿಂದ ತಪ್ಪಿಸಿಕೊಳ್ಳಲು ಮನೆ ಮುಂದೆ ನೀರು ನಿಲ್ಲದಂತೆ, ಸ್ವಚ್ಛತೆ ಕಾಪಾಡಿಕೊಳ್ಳಿ -ಶಾಸಕ ನಾಡಗೌಡ.
ಸಿಂಧನೂರು: ಮಳೆ ನೀರು ಮನೆ ಮುಂದೆ ನಿಲ್ಲದಂತೆ, ಚರಂಡಿಯ ಸ್ವಚ್ಛತೆ ಕಾಪಾಡಿಕೊಂಡು ಡೆಂಗ್ಯೋ ರೋಗದಿಂದ ನಿಮ್ಮನ್ನು ಕಾಪಾಡಿಕೊಳ್ಳಬೇಕೆಂದು ಶಾಸಕ ವೆಂಕಟರಾವ್ ನಾಡಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ
ಜಿಲ್ಲಾಡಾಳಿತ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಹಮ್ಮಿಕೊಳ್ಳಲಾದ ರಾಷ್ಟ್ರಿಯ ಡೆಂಗ್ಯೊ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಮೊದಲಿಗಿಂತ ಇತ್ತೀಚಿನ ದಿನಗಳಲ್ಲಿ ಡೆಂಗ್ಯೊ ಪ್ರಕರಣ ಕಡಿಮೆ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಆಶಾ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಬಸವ ನರ್ಸಿಂಗ್ ,ಪ್ಯಾರಾಮೇಡಿಕಲ್ ವಿಧ್ಯಾರ್ಥಿಗಳು ಡೆಂಗ್ಯೂ ನಿಯಂತ್ರಣ ಬಗ್ಗೆ ಜನರಲ್ಲಿ ಜಾತಾ ಮಾಡುವ ಮೂಲಕ ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಅಯ್ಯನಗೌಡ , ಮುಖ್ಯವೈದ್ಯಾಧಿಕಾರಿ ಡಾ.ನಾಗರಾಜ ಕಾಟ್ವಾ, ಡಾ.ಜಿವನೇಶ್ವರಯ್ಯ,ಡಾ.ಬಸವರಾಜ ,ಎಫ್ ಎ ಹಣಗಿ, ರಂಗನಾಥ ಗುಡಿ,ಸಂಗನಗೌಡ ಪಾಟೀಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030