ಜುಲೈ 9 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಸದುಪಯೋಗ ಪಡೆದುಕೊಳ್ಳಿ- ವೈ ನರೇಂದ್ರನಾಥ….!!!

Listen to this article

ಜುಲೈ 9 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಸದುಪಯೋಗ ಪಡೆದುಕೊಳ್ಳಿ- ವೈ ನರೇಂದ್ರನಾಥ.

ಸಿಂಧನೂರು : ಜುಲೈ 8. ವಿದ್ಯಾ ಪಬ್ಲಿಕ್ ಸ್ಕೂಲ್,ಲಯನ್ಸ್ ಕ್ಲಬ್,ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ, ಈ ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜುಲೈ 9 ಶನಿವಾರದಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನರೇಂದ್ರನಾಥ ರೈ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಲಿದೆ. ಈ ಉಚಿತ ತಪಾಸಣೆ ಶಿಬಿರವನ್ನ ಲಯನ್ಸ್ ಕ್ಲಬ್ ಮತ್ತು ವಿದ್ಯಾ ಪಬ್ಲಿಕ್ ಸ್ಕೂಲ್ ವಹಿಸಿಕೊಂಡು ನಡೆಸುತ್ತಿದೆ. ಈ ಶಿಬಿರದಲ್ಲಿ ಶಾರೀರಿಕ ಮತ್ತು ಮಾನಸಿಕ, ತಪಾಸಣೆ ಸೇರಿದಂತೆ ನರರೋಗ, ಮೂತ್ರಪಿಂಡ, ಮೊಣಕಾಲು ನೋವು, ಗ್ಯಾಸ್ಟ್ರಿಕ್‌, ಹೀಗೆ ಹತ್ತು ಹಲವಾರು ರೋಗವುಳ್ಳವರು ಉಚಿತ ತಪಾಸಣೆ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸದಸ್ಯರು, ವಿದ್ಯಾ ಪಬ್ಲಿಕ್ ಸ್ಕೂಲ್ ನ ಆಡಳಿತ ಅಧಿಕಾರಿ ವೈ ನರೇಂದ್ರನಾಥ ರೈ ದೇರ್ಲಾ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು…

 

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend