ಸಾರ್ವಜನಿಕ ಆಸ್ಪತ್ರೆಯಲ್ಲಿ ” ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ”..!!!

Listen to this article

ಸಾರ್ವಜನಿಕ ಆಸ್ಪತ್ರೆಯಲ್ಲಿ ” ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ”

ಸಿಂಧನೂರು : ಜುಲೈ 19. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಲಯ ಸಿಂಧನೂರು ಇವರ ಸಂಯುಕ್ತಾಶ್ತ್ರಯದಲ್ಲಿ ಇಂದು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ” ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ” ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಅಧಿಕಾರಿಗಳು ಉದ್ಘಾಟಿಸಿದರು.

ಇವರು ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವು ದಿನಾಂಕ 18.07.2022 ರಿಂದ 15.8.2022 ರವರೆಗೆ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು ಮನೆಮನೆಗಳಿಗೆ ಬಂದು ಕ್ಷಯ ರೋಗದ ಲಕ್ಷಣಗಳಾದ ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆ ವೇಳೆಯಲ್ಲಿ ಬಿಟ್ಟು ಬಿಟ್ಟು ಜ್ವರ ಬರುವುದು, ಹಸಿವು ಆಗದೆ ಇರುವುದು, ತೂಕ ಕಡಿಮೆಯಾಗುವುದು, ಎದೆಯಲ್ಲಿ ನೋವಾಗುವುದು ಈ ಲಕ್ಷಣಗಳು ಇದ್ದರೆ ದಯವಿಟ್ಟು ಸ್ವಯಂ ಪ್ರೇರಿತವಾಗಿ ಕಫ ಪರೀಕ್ಷೆಯನ್ನು ಮಾಡಿಸಿಕೊಳ್ಳಲು ವಿನಂತಿಸಿದರು.

ಈ ಸಂದರ್ಭದಲ್ಲಿ ಆರ್. ಬಿ. ಎಸ್. ಕೆ ವೈದ್ಯಾಧಿಕಾರಿ, ತಾಲೂಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ್ ಗುಡಿ, ಸಂಗನಗೌಡ ಮಾಲಿಪಾಟೀಲ್ ಹಾಗೂ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗೀತಾ ಹಿರೇಮಠ ಮತ್ತು ಕ್ಷಯರೋಗ ಘಟಕದ ಸಿಬ್ಬಂದಿಗಳಾದ ಅಮೀರ್, ಯಮನೂರ, ಅಬ್ದುಲ್ ಹಮೀದ್, ನವೀನ್ ಕುಮಾರ ಹಾಗೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಬಸವರಾಜ್ ಹಾಗೂ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತರು ಇದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend