ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ನೂತನ ಅಧ್ಯಕ್ಷರಾಗಿ ಕೊಲ್ಲಾ ಶೇಷಗಿರಿ ರಾವ್ ನೇಮಕ…!!!

Listen to this article

ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ನೂತನ ಅಧ್ಯಕ್ಷರಾಗಿ ಕೊಲ್ಲಾ ಶೇಷಗಿರಿ ರಾವ್ ನೇಮಕ.

ಸಿಂಧನೂರು : ಜುಲೈ. 26.ಕರ್ನಾಟಕ ಸರ್ಕಾರ ಸಚಿವಾಲಯ ವಿಕಾಸಸೌಧ ಬೆಂಗಳೂರು ದಿನಾಂಕ:25.07.2022, ಸಂಖ್ಯೆ: ಜಸಂಇ 05 ಸಿಎಟಿ 2022 (8)ಕರ್ನಾಟಕ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಅಧಿನಿಯಮ 1980ರ ಸೆಕ್ಷನ್ 4(1)(ಎ)
ರನ್ವಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆ ಮುನಿರಾಬಾದ್ ಕಾಡಾ ಅಧ್ಯಕ್ಷರನ್ನಾಗಿ ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿ ರಾವ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ, ಅದೇ ಅಧಿನಿಯಮದ 4(2)(i)ರನ್ವಯ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನಗೊಳಿಸಲಾಗಿದೆ.

ಕರ್ನಾಟಕರಾಜ್ಯಪಾಲರ ಆದೇಶದ ಅನುಸಾರ ಅವರ ಹೆಸರಿನಲ್ಲಿ ಡಿ. ಧನಂಜಯ ಸರ್ಕಾರದ ಅಧೀನ ಕಾರ್ಯದರ್ಶಿ ಜಲಸಂಪನ್ಮೂಲ ಇಲಾಖೆ (ಕಾಡಾ) ಅಧಿಸೂಚನೆ ಹೊರಡಿಸಿದೆ.

ಕೊಲ್ಲಾ ಶೇಷಗಿರಿ ರಾವ್ ರವರು ಸುಮಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿದ್ದ ಅವರನ್ನು ಹೈಕಮಾಂಡ್ ಗುರುತಿಸಿ ಕಾಡಾ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ನೇಮಕ ಮಾಡಿದ್ದಾರೆ.

ಆರಂಭದಲ್ಲಿ ಬಿಜೆಪಿ ಮೂಲಕ ರಾಜಕೀಯಕ್ಕೆ ಬಂದಿದ್ದ ಅವರು ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಅವರು, ಎರಡು ಬಾರಿ ಸಿಂಧನೂರು ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು ಸಹ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಇದೀಗ ಅವರ ಸೇವೆಯನ್ನು ಗುರುತಿಸಿ ಬಿಜೆಪಿ ಹೈಕಮಾಂಡ್ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ( ಕಾಡಾ) ಅಧ್ಯಕ್ಷರನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದೆ. ಅವರ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend