ಗ್ರಾಮೀಣ ಯುವ ಮೋರ್ಚಾ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ.
ಸಿಂಧನೂರು: ಜುಲೈ 29. ಗ್ರಾಮೀಣ ಯುವ ಮೋರ್ಚಾದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹತ್ಯೆಗಿಡಾಗಿರುವಂತ ಪ್ರವೀಣ್ ನೆಟ್ಟಾರ್ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಿಂಧನೂರು ಯುವ ಮೋರ್ಚಾ ಗ್ರಾಮೀಣ ಮಂಡಲದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಗೋಮರ್ಸಿ ಗ್ರಾಮದ ಎಲ್ಲಾ ಹಿರಿಯರು ಊರಿನ ಗ್ರಾಮಸ್ಥರು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಕೊಪ್ಪಳದ ಸಂಸದರಾದ ಕೆ ವಿರುಪಾಕ್ಷಪ್ಪ, ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಅಮರೇಶ ರೈತನಗರ ಕ್ಯಾಂಪ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವನಗೌಡ ಗೊರಬಾಳ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲ್ಗುಂದಾ, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದು ಹೂಗಾರ, ಶಿವಬಸನಗೌಡ ಗೊರೇಬಾಳ, ಮಾಡಶಿರವಾರ ಪಂಚಾಯತಿ ಅಧ್ಯಕ್ಷರಾದ ಶ್ರೀನಿವಾಸ, ಸಿದ್ದು, ಮಲ್ಲಯ್ಯ, ಗಂಗಾಧರ್ ಹೂಗಾರ ಇದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030