ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಭಾಷಣ ಸ್ಪರ್ಧೆ
ಸಿಂಧನೂರು : ಜುಲೈ. 29. ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಭಾರತ ಸ್ವಾತಂತ್ರ್ಯೋತ್ಸವದ 75 ನೇ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾದ ” ಭಾರತ ಸ್ವತಂತ್ರ ಚಳುವಳಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ಸಿನ ಪಾತ್ರ ” ಈ ವಿಷಯವನ್ನು ಆಧರಿಸಿ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಪೌಂಡೇಶನ್ ಅಧ್ಯಕ್ಷರಾದ ಸೋಮನಗೌಡ ಬಾದರ್ಲಿ ಅವರು ಉದ್ಘಾಟಿಸಿ ಮಾತನಾಡಿದರು.
ಸದರಿ ಕಾರ್ಯಕ್ರಮದ ತೀರ್ಪುಗಾರರಾಗಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕರು, ಡಾ. ಮರಿಲಿಂಗಪ್ಪ, ಶಂಕರ್ ವಾಲೇಕರ್,ಶ್ರೀಮತಿ ಸುನಿತಾ ದೇವಿ ಪ್ರಾಧ್ಯಾಪಕರು ಇದ್ದರು. ನೂರು ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಇದರಲ್ಲಿ ಐದು ಜನ ವಿಜೇತರಾದ ಸ್ಪರ್ಧಾರ್ಥಿಗಳಿಗೆ ಅಗಸ್ಟ್ ಒಂದರಂದು ಸನ್ಮಾನಿಸಿ ಗೌರವಿಸಿ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಎಲ್ಲಾ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ವಿಷಯವನ್ನು ಆಧರಿಸಿ ತಮ್ಮ ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವೆಂಕಟೇಶ ರಾಗಲಪರ್ವಿ, ಡಾ. ಹನುಮಂತಪ್ಪ, ಸಂಗನಗೌಡ, ಶಿವಯ್ಯ ಎಂ ಹಿರೇಮಠ, ಬಸವರಾಜ್ ತಡಕಲ್, ತಿಮ್ಮಣ್ಣ ನಾಯಕ್, ಪ್ರಾಚಾರ್ಯರು ಅನಿಕೇತನ ಕಾಲೇಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು…
ವರದಿ. ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030