ಬಸ್ ಡಿಕ್ಕಿ, ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ವ್ಯಕ್ತಿ ಸಾವು,..!!!

Listen to this article

ಬಸ್ ಡಿಕ್ಕಿ, ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗಮಧ್ಯ ವ್ಯಕ್ತಿ ಸಾವು,

ಸಿಂಧನೂರು :ಆಗಸ್ಟ್.4. ಬಸ್‌ ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ತಾಲೂಕಿನ ವಿರುಪಾಪೂರು ಗ್ರಾಮದ ವ್ಯಕ್ತಿ ಹನುಮಂತಪ್ಪ ಗೋನಾಳ ಜಾತಿ (ಮಾದಿಗ) ವಯಸ್ಸು (55)ಮೃತರು. ಕೂಲಿ ಕೆಲಸ ಮಾಡುತ್ತಿದ್ದ ಹನುಮಂತಪ್ಪ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ದಾಟುವಾಗ ಚಾಲಕನ ಅತೀವೇಗ, ನೀರ್ಲಕ್ಷ ತನದಿಂದ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಕಾಲಿನ ಮೇಲೆ ಬಸ್ಸಿನ ಗಾಲಿ ಹತ್ತಿ ಮೂಳೆಗಳೆಲ್ಲ ಪುಡಿ ಪುಡಿಯಾಗಿವೆ.

ಹೊಸಪೇಟೆ ಜಿಲ್ಲೆಯ ಡಿಪೋ ಹೈದ್ರಾಬಾದ್ ನಿಂದ ಹೊಸಪೇಟೆ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಸಂಖ್ಯೆ ಕೆಎ.33, ಎಪ್ 0433 ಬಸ್ ಈತನ ಮೇಲೆ ಹತ್ತಿ ಹೋಗಿತ್ತು.ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದಾಗ ತಕ್ಷಣ ಆ್ಯಂಬುಲೆನ್ಸ್‌ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಶಾಸಕರ ಪುತ್ರ ಅಭಿಷೇಕ ನಾಡಗೌಡ ಸ್ಥಳಕ್ಕೆ ಬಂದು ಪರಿಶೀಲಿಸಿಸಾರ್ವಜನಿಕ ಆಸ್ಪತ್ರೆಗೆ ಬೇಟಿ ಮಾಡಿ ವೈಧ್ಯರ ಬಳಿ ಮಾಹಿತಿ ಪಡೆದರು. ಅಪಘಾತ ನಡೆದ ಸ್ಥಳದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು ನಂತರ ಪೋಲಿಸರು ತಿಳಿಗೊಳಿಸಿದರು.ಈ ಕುರಿತು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend