ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ತರಬೇತಿ…!!!

Listen to this article

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ತರಬೇತಿ.

ಸಿಂಧನೂರು :ಅ.4.ನಗರದ ತಾಲೂಕುಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನ ವಿಭಾಗ ರಾಯಚೂರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಸಿಂಧನೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಆಯುಷ್ ವೈದ್ಯಾಧಿಕಾರಿಗಳಿಗೆ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಪ್ರಭಾರಿ ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಶಾಕಿರ್ ಮೈನುದ್ದಿನ್ ಇವರು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು.

ಈ ಒಂದು ತರಬೇತಿಯನ್ನು ವಿಶ್ವ ಆರೋಗ್ಯ ಸಲಹೆಗಾರ (ಕಲಬುರ್ಗಿ ವಿಭಾಗ) ಡಾ.ಸತೀಶ್ ಇವರು ಕ್ಷಯರೋಗ ಚಿಕಿತ್ಸೆಯನ್ನು ನೀಡಿದ ರೋಗಿಗಳ ವಿವರವನ್ನು ನಮ್ಮ ಇಲಾಖೆಗೆ ನೀಡಬೇಕು ಹಾಗೂ ಕ್ಷಯ ರೋಗದ ಬಗ್ಗೆ ಸಂಪೂರ್ಣವಾಗಿ ತರಬೇತಿಯನ್ನು ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಟಿ. ಎಚ್. ಓ. ಡಾ. ಅಯ್ಯನಗೌಡ, ಆಯುಷ್ ವೈದ್ಯಾಧಿಕಾರಿಗಳ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಡಾ. ಗುರುಪ್ರಸಾದ, ಕಾರ್ಯದರ್ಶಿಗಳಾದ ವಿಜಯಕುಮಾರ ಜೋಶಿ, ಜಿಲ್ಲಾ ಕ್ಷಯರೋಗ ಮೇಲ್ವಿಚಾರಕ ಅಂಬರೀಶ ಕುಮಾರ, ಮೋಹಿನ್ ಪಾಷಾ, ತಾಲೂಕ ಕ್ಷಯರೋಗ ಘಟಕದ ಸಿಬ್ಬಂದಿಗಳಾದ ಅಮೀರ್,ಯಮನೂರ್, ಅಬ್ದುಲ್ ಹಮೀದ್, ನವೀನ್ ಕುಮಾರ್ ಇದ್ದರು..

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend