ಸಿರುಗುಪ್ಪ: ಮತದಾನ ಜಾಗೃತಿಗೆ ಸೈಕಲ್ ಜಾಥಾ
ಬಳ್ಳಾರಿ,:ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸಿರುಗುಪ್ಪ ತಾಲ್ಲೂಕು ಆಡಳಿತ, ನಗರಸಭೆ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನದ ಮಹತ್ವ ಸಾರಲು ಗುರುವಾರ ಪಟ್ಟದದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಯಿತು.
ನಮ್ಮ ಮತ ನಮ್ಮ ಭವಿಷ್ಯವಾಗಿದ್ದು, ನಮ್ಮ ಮತ ಮಾರಾಟಕ್ಕಾಗಿ ಇರುವುದಿಲ್ಲ, ನಿಮ್ಮ ಮತದಾನವೇ ನಿಮ್ಮ ಧ್ವನಿ, ಯಾವುದೇ ಆಮಿಷಕ್ಕೆ ಒಳಗಾಗದೆ ನ್ಯಾಯ ಸಮ್ಮತವಾಗಿ ಮತ ಚಲಾಯಿಸಿ ಎನ್ನುವ ಭಿತ್ರಿ ಪತ್ರಗಳನ್ನೊಳಗೊಂಡ ಫಲಕಗಳನ್ನು ಹಿಡಿದು, ಘೋಷಣೆ ಕೂಗುತ್ತಾ ಪಟ್ಟಣದ ವಿವಿಧೆಡೆ ಸಂಚರಿಸಿ ಮೂಲಕ ಸಾರ್ವಜನಿಕರು ಮತದಾನದಿಂದ ಹೊರಗುಳಿಯಬಾರದು ಎಂದು ಮತದಾನ ಅರಿವು ಮೂಡಿಸಲಾಯಿತು.
ಬಳಿಕ ಮತದಾನ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ “ನಾನು ಹೆಮ್ಮೆಯ ಮತದಾರ” ಎನ್ನುವ ಸೆಲ್ಫಿ ಬೂತ್ ಹಾಕಲಾಗಿತ್ತು. ಅಧಿಕಾರಿಗಳು, ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಸಿರುಗುಪ್ಪ ನಗರಸಭೆಯ ಪೌರಾಯುಕ್ತ ಗುರು ಪ್ರಸಾದ್, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್.ಎಸ್ ದಂಡಪ್ಪನವರ ಸೇರಿದಂತೆ ತಾಲ್ಲೂಕು ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಬಾಗವಹಿಸಿದ್ದರು….
ವರದಿ. ಉಮೇಶ್, ಕೆ, ಸಿರಿಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030