ಕಾನಿಪ ಧ್ವನಿ ಹಗರಿಬೊಮ್ಮನಹಳ್ಳಿಯಲ್ಲಿಂದು ಅರ್ಥಪೂರ್ಣ ಪತ್ರಿಕಾ ದಿನಾಚರಣೆ :- ಇಂದು ಮಧ್ಯಾಹ್ನ ವಿಜಯನಗರ ಜಿಲ್ಲಾ ಹಗರಿಬೊಮ್ಮನಹಳ್ಳಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನಿಪ ಧ್ವನಿಯ ಹಗರಿಬೊಮ್ಮನಹಳ್ಳಿ ತಾಲೂಕು ಘಟಕದಿಂದ ಅರ್ಥಪೂರ್ಣ ಪತ್ರಿಕಾ ದಿನಾಚರಣೆಯ ಉದ್ಗಾಟನೆಯನ್ನು ಇಲ್ಲಿನ ಜನಪ್ರಿಯ ಶಾಸಕರಾದ ನೇಮಿರಾಜ ನಾಯ್ಕ ರವರು ನೆರವೇರಿಸಿದರು. ಸಾನಿಧ್ಯವನ್ನು ಜಗದ್ಗುರು ಶ್ರೀಸೋಮಶಂಕರ ಮಹಾಸ್ವಾಮಿಗಳು, ಡಾ.ಮಹೇಶ್ವರ ಮಹಾಸ್ವಾಮಿಗಳು, ಶ್ರೀ ಶಿವಲಿಂಗ ರುದ್ರಮುನಿ ಸ್ವಾಮಿಗಳು ಹಾಗೂ ಅಭಿನವ ಶ್ರೀ ಹಾಲ ಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿದ್ದಂತ ಈ ಸಮಾರಂಭದ ಪ್ರಸ್ತಾವಿಕ ನುಡಿಗಳನ್ನು ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಸರ್ ಪತ್ರಕರ್ತರ ಜ್ವಲಂತ ಸಮಸ್ಯಗಳ ಕುರಿತಂತೆ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷರಾದ ಶಿವಮೂರ್ತಿ ಸರ್ ವಹಿಸಿದಂತ ಈ ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಹಂಪಿ ವಿಶ್ವವಿದ್ಯಾಲಯದ ಜಾನಪದ ಅಧ್ಯಯನದ ಮುಖ್ಯಸ್ಥರಾದ ಡಾ.ಮಂಜುನಾಥ ಬೇವಿನಕಟ್ಟಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ರೈತ ಸಂಘದ ಕಾರ್ಯದರ್ಶಿಗಳಾದ ವೀರ ಸಂಗಯ್ಯ,ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್, ಮಾಧ್ಯಮ ಅಕಾಡೆಮಿ ಪುರಸ್ಕೃತರಾದ ನಿಂಗಜ್ಜ ಹಾಗೂ ಇನ್ನೀತರ ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಸಾಕ್. ಎಂ ರಾಜ್ಯ ಕಾರ್ಯದರ್ಶಿಗಳು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ…..
ವರದಿ. ಪ್ರಕಾಶ್, ಹಗರಿಬೊಮ್ಮನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030