ಹರಪನಹಳ್ಳಿ ಕ್ಷೇತ್ರದಲ್ಲಿ 6ನೇ ದಿನದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ…!!!

Listen to this article

ಹರಪನಹಳ್ಳಿ ಕ್ಷೇತ್ರದಲ್ಲಿ 6ನೇ ದಿನದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಹಾಗೂ ವಿ.ಪ ಚುನಾವಣಾ ಪ್ರಚಾರ ಕೈಗೊಂಡ ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ ಪಿ ವೀಣಾ ಮಹಾಂತೇಶ್!!

ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಕೆ ಸಿ ಕೊಂಡಯ್ಯ ಅವರ ಪರವಾಗಿ ಇಂದು ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ ಪಿ ವೀಣಾ ಮಹಾಂತೇಶ್ ಅವರು ಮೈದೂರು ಗ್ರಾ.ಪಂ ಪಂಚಾಯತ್ ವ್ಯಾಪ್ತಿಯ ಬಳಿಗಾನೂರು, ಹಗರಿಗಜಾಪುರ, ಗೌರಿಪುರ ಹಾಗೂ ಕೆಸರಹಳ್ಳಿ ಗ್ರಾಮಗಳಲ್ಲಿನ ಗ್ರಾ.ಪಂ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಹಾಗೆಯೇ,
ರಾಷ್ಟ್ರೀಯ ಕಾಂಗ್ರೆಸ್ ನ ಸದಸ್ಯತ್ವ ಅಭಿಯಾನದ ಪ್ರಯುಕ್ತ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ ಮೇಲ್ಕಂಡ ಗ್ರಾಮಗಳಲ್ಲಿ ಸತತ 6ನೇ ದಿನದ ಪ್ರಯುಕ್ತ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಗ್ರಾಮದ ಅಪಾರ ಪಕ್ಷದ ಅಭಿಮಾನಿಗಳನ್ನು ಒಂದು ಕಡೆ ಸೇರಿಸಿ ಅವರಿಗೆಲ್ಲ ಸದಸ್ಯತ್ವ ನೀಡಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೈಗೊಂಡಿದ್ದ ಜನಪರ ಯೋಜನೆಗಳನ್ನು ವಿವರಿಸಿ, ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆಯುವ ಮೂಲಕ ಪಕ್ಷವನ್ನು ಬೆಂಬಲಿಸಲು ಕರೆ ನೀಡಿದರು…

 

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend