ಸುಪ್ರಸಿದ್ದ ಐತಿಹಾಸಿಕ ಹೊಂದಿರುವ ಹರಪನಹಳ್ಳಿಗೆ ಹೊಂದಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ
ಹರಪನಹಳ್ಳಿ: ಪಟ್ಟಣಕ್ಕೆ ಹೊಂದಿಕೊಂಡಿರುವ ದೇವರ ತಿಮ್ಮಲಾಪುರ ಗ್ರಾಮದ ಸುಪ್ರಸಿದ್ದ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ರಥೋತ್ಸವ ಅಂಗವಾಗಿ ಸೋಮವಾರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ಕೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಚಾಲನೆ ನೀಡಿದರು.
ದೇವಸ್ಥಾನದ ಕಲ್ಯಾಣ ಮಂಟದಲ್ಲಿ ರಥೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ಬಡಿಸುವ ಮೂಲಕ ಅನ್ನ ಸಂತರ್ಪಣೆಗೆ ಚಾಲನೆ ನೀಡಿದ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಮಾತನಾಡಿ, ಪ್ರತಿವರ್ಷ ಸಹೋದರ, ಮಾಜಿ ಶಾಸಕ ಎಂ.ಪಿ.ರವೀಂದ್ರ ಅವರು ಲಕ್ಷ್ಮೀ ವೆಂಕಟೇಶ್ವರ ರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿಕೊಂಡು ಬಂದಿದ್ದರು. ಅದನ್ನು ನಾನು ಕಳೆದ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ರವೀಂದ್ರ ಮಾಡಿಕೊಂಡು ಬಂದಿರುವ ಎಲ್ಲಾ ಬಗೆಯ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳನ್ನು ನಿರಂತರವಾಗಿ ಮುನ್ನೆಡೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ಲಕ್ಷ್ಮೀ ವೆಂಕಟೇಶ್ವರ ದೇವಾಲಯ ರಾಜ್ಯದಲ್ಲಿಯೇ ಪ್ರಸಿದ್ದಿ ಪಡೆದಿದೆ. ಇಲ್ಲಿಗೆ ನಾನಾ ಜಿಲ್ಲೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಾರೆ. ತಿರುಪತಿ ಗೆ ಹೋಗಲು ಸಾಧ್ಯವಾಗದವರು ಇಲ್ಲಿಗೆ ಬರುವ ಪ್ರತೀತಿ ಇದೆ. ಇಂತಹ ಪ್ರಸಿದ್ಧ ದೇವರ ಭಕ್ತ ಗಣಕ್ಕೆ ಅನ್ನ ಸಂತರ್ಪಣೆ ಮಾಡುವಂತಹ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಹೇಳಿದರು.
ಇದಕ್ಕೂ ಮೊದಲು ದೇವಸ್ಥಾನಕ್ಕೆ ತೆರಳಿದ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯವರು ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಎಂ.ವಿ.ಅಂಜಿನಪ್ಪ, ಗೊಂಗಡಿ ನಾಗರಾಜ್, ಮುಖಂಡರಾದ
ತಿಮ್ಮಲಾಪುರ ಈಶ್ವರ್, ಪಿ.ಜಯಲಕ್ಷ್ಮಿ, ಕಲ್ಲಹಳ್ಳಿ ಗೋಣ್ಯೆಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮತ್ತೂರು ಬಸವರಾಜ್, ಚಿಗಟೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಶಿವರಾಜ್, ರವಿ ಯುವ ಶಕ್ತಿ ಪಡೆ ಅಧ್ಯಕ್ಷ ಉದಯಶಂಕರ್, ಎನ್ ಎಸ್ ಯುಐ ಅಧ್ಯಕ್ಷ ಶ್ರೀಕಾಂತ್, ಪ್ರಸಾದ್ ಕವಾಡಿ, ನೇತ್ರಾವತಿ, ಕವಿತಾ ಸುರೇಶ್, ಸಹನಾ ನಾಗರಾಜ್, ಯುವ ಕಾಂಗ್ರೆಸ್ ಜಿಲ್ಲಾ ಪ್ತಧಾನ ಕಾರ್ಯದರ್ಶಿ ಕೆ.ರಿಯಾಜ್, ಅಡವಿಹಳ್ಳಿ ಗ್ರಾ.ಪಂ ಸದಸ್ಯರಾದ ಪ್ರಸನ್ನ, ರೇಣುಕಾ ಮಂಜುನಾಥ, ಸಾಸ್ವಿಹಳ್ಳಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು…
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030