ವಿಜಯನಗರ ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿ ದಾದಾಪೀರ್ ನೇಮಕ.
ಹರಪನಹಳ್ಳಿ ತಾಲ್ಲೂಕಿನ ದಾದಾಪೀರ್. ಮಕರಬ್ಬಿ ಅವರು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಮತ್ತು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಮುಖಂಡರು ಹಾಗೂ ಮಾಧ್ಯಮ ವಿಶ್ಲೇಷಕಿಯಾದ ಎಂ. ಪಿ. ವೀಣಾ ಮಹಾಂತೇಶ್ ಅವರ ಮಾರ್ಗದರ್ಶನದಂತೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷರಾದ ಬಿ. ಆರ್. ನಾಯ್ಡು ಅವರ ದಾದಾಪೀರ್ ಅವರನ್ನ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ವರಡಿಸಿದ್ದಾರೆ. ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾದಾಪೀರ್ ಅವರು ಸುಮಾರು ನಾಲ್ಕು ವರ್ಷಗಳಿಂದ ಕಾಂಗ್ರೇಸ್ ಪಕ್ಷಕ್ಕೆ ನಿಷ್ಠಾವಂತ ಸೇವೆಯನ್ನ ಸಲ್ಲಿಸಿದ್ದಾರೆ. ಹಾಗೂ ಪಕ್ಷದಲ್ಲಿ ಅನೇಕ ಇತರೆ ಜವಾಬ್ದಾರಿಗಳನ್ನ ನಿಭಾಯಿಸಿದ್ದಾರೆ. ಇವರ ಈ ಕಾರ್ಯಗಳನ್ನ ಪರಿಗಣಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.ದಾದಾಪೀರ್ ಅವರು ತಮ್ಮ ಸ್ಥಾನವನ್ನು ಅಲಂಕರಿಸಿ ಪಕ್ಷದ ಸಂಘಟನೆ ಹಾಗೂ ವಾಟ್ಸಾಪ್, ಫೇಸಬುಕ್, ಟ್ವಿಟರ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಾಂಗ್ರೇಸ್ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಕ್ರಮವನ್ನ ಕೈಗೊಳ್ಳಬೇಕೆಂದು ನೇಮಕ ಆದೇಶದಲ್ಲಿ ಸೂಚಿಸಿದ್ದಾರೆ. ನಂತರ ನೂತನ ಸಾಮಾಜಿಕ ಜಾಲತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಯಾದ ದಾದಾಪೀರ್ ಅವರು ಮಾತನಾಡಿ ಮಾಜಿ ಉಪಮುಖ್ಯಮಂತ್ರಿಗಳಾದ ಎಂ. ಪಿ. ಪ್ರಕಾಶ್ ಅವರ ಪುತ್ರಿ ಹಾಗೂ ಮಾಜಿ ಶಾಸಕರಾದ ಎಂ. ಪಿ. ರವೀಂದ್ರ ಅವರ ಸಹೋದರಿ ಎಂ. ಪಿ. ವೀಣಾ ಮಹಾಂತೇಶ್ ಹಾಗೂ ಗುಲ್ಬರ್ಗ ಡಿವಿಜನ್ ವಿಭಾಗದ ಅಧ್ಯಕ್ಷರಾದ ನಿಂಬಗಲ್ ರಾಮಕೃಷ್ಣ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಕಡ್ಲ ಹಾಲೇಶ್ ರವರು ನನಗೆ ಈ ಜವಾಬ್ದಾರಿಯನ್ನ ನೀಡಿ ಪಕ್ಷದಲ್ಲಿ ಇನ್ನೊಷ್ಟು ಸೇವೆಗೆ ಅವಕಾಶವನ್ನ ಮಾಡಿದ್ದಕ್ಕೆ ಧನ್ಯವಾದಗಳನ್ನ ತಿಳಿಸಿದರು.ಹಾಗೂ ಇತರೆ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಎಲ್ಲ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ನಿರ್ದೇಶನ ನೀಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಬಿ. ಆರ್. ನಾಯ್ಡು ಅವರು ನಮ್ಮನ್ನು ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದು. ಈ ಜವಾಬ್ದಾರಿ ವಹಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಕಾಂಗ್ರೇಸ್ ಪಕ್ಷದ ಏಳ್ಗೆಗೆ ಹಗಲಿರುಳು ಶ್ರಮಿಸಲಾಗುವುದು. ಹಾಗೂ ಪಕ್ಷದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರು ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು…
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030