ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹರಪನಹಳ್ಳಿಯಲ್ಲಿ ಪ್ರತಿಭಟನೆ…ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹರಪನಹಳ್ಳಿಯಲ್ಲಿ ಪ್ರತಿಭಟನೆ!!!

Listen to this article

ದಿನಾಂಕ : 07:01:2022 ರಂದು ನಡೆದ ಬಿಸಿಯೂಟ ಕಾರ್ಯಕರ್ತೆಯರ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹರಪನಹಳ್ಳಿಯಲ್ಲಿ ಪ್ರತಿಭಟನೆ

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹರಪನಹಳ್ಳಿ ತಾಲೂಕು ವಿಜಯನಗರ ಜಿಲ್ಲೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
ಹರಪನಹಳ್ಳಿ :ಬಿಸಿಯೂಟ
ಕಾರ್ಯಕರ್ತೆಯರಿಂದ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮತ್ತು ಸಿಐಟಿಯುಸಿ ಪ್ರತಿಭಟನೆ ಕನಿಷ್ಠ ವೇತನ ಜಾರಿ ಮಾಡಬೇಕು, ಕೆಲಸದ ಭದ್ರತೆ ನೀಡಬೇಕು.

ಬಿಸಿಯೂಟ ಪೂರೈಕೆ ಖಾಸಗಿ ಸಂಸ್ಥೆಗಳಿಗೆ ನೀಡಬಾರದು. ತಮ್ಮನ್ನು ಕಾರ್ಮಿಕ ಕಾಯ್ದೆಯಡಿ ಸೇರಿಸಲು ಆಗ್ರಹಿಸಿ ಧರಣಿ ನಡೆಸಲು ಮುಂದಾಗಿದ್ದಾರೆ.
ಕಾರ್ಯಕರ್ತೆಯರು ಬೆಳಗ್ಗೆ 11 ಗಂಟೆಗೆ ಹರಪನಹಳ್ಳಿ ಬಸ್ಟ್ಯಾಂಡ್ ಸರ್ಕಲ್ ನಿಲ್ದಾಣದಿಂದ ಮೂಲಕ ಆಗಮಿಸಿ ಮೇನಿವಿಧಾನ ಸೌದ ವರೆಗೂ ಪ್ರತಿಭಟನೆ ನಡೆಸಿರುತ್ತಾರೆ ಹೀಗಾಗಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಇಂದು, ನಾಳೆ‌ ಶಾಲಾ ಮಕ್ಕಳಿಗೆ ಬಿಸಿ ಊಟ ಸಿಗುವುದಿಲ್ಲ.

ಬಿಸಿಯೂಟ ಕಾರ್ಯಕರ್ತೆಯರ ಮುಖ್ಯ ಬೇಡಿಕೆಗಳು:
-ಕನಿಷ್ಠ ವೇತನ ಜಾರಿಯಾಗ ಬೇಕು
-ಬಿಸಿಯೂಟ ಪೂರೈಕೆ ಖಾಸಗಿ ಸಂಸ್ಥೆಗಳಿಗೆ ಕೊಡುವ ಹುನ್ನಾರ ಕೈ ಬಿಡಬೇಕು
-ಕೆಲಸದ ಭದ್ರತೆ ಕೊಡಬೇಕು
-ಪ್ರತಿ ತಿಂಗಳು ಐದನೇ ತಾರೀಖು ಸಂಬಳ ಕೊಡಬೇಕು
-ನಮ್ಮನ್ನು ಕಾರ್ಮಿಕರು ಅಂತ ಪರಿಗಣಿಸಿ ಕಾರ್ಮಿಕ ಕಾಯ್ದೆ ಅಡಿಯಲ್ಲಿ ತರಬೇಕು ಈ ರೀತಿ ವಿವಿಧ ಬೇಡಿಕೆಗಳನ್ನು ಮುಂದೆ ಇಟ್ಟು ಇಂದು ಧರಣಿ ನಡೆಸಲಿದ್ದಾರೆ. ಅಲ್ಲದೆ ಕಳೆದ ಹದಿನೇಳು ವರ್ಷಗಳಿಂದ ಬಿಸಿ ಊಟ ತಯಾರು ಮಾಡುತ್ತಿದ್ದರು ಮುಖ್ಯ ಅಡಿಗೆಯವರಿಗೆ 2700 ರೂಪಾಯಿ ಹಾಗೂ ಸಹಾಯಕ ಅಡುಗೆ ಮಾಡುವವರಿಗೆ 2600 ನೀಡಲಾಗ್ತಿದೆ. ರಾಜ್ಯ ಸರ್ಕಾರ 75% ರಷ್ಟು ಕೇಂದ್ರ ‌ಸರ್ಕಾರ 25 ರಷ್ಟು ಹಣ ಪಾವತಿ ಮಾಡ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿ ಊಟ ತಯಾರು ಮಾಡ್ತಾರೆ. ಶಾಲೆಗಳಲ್ಲಿ ಹೆಚ್ಚುವರಿ ಮೆನು ಜಾರಿಗೆ ತಂದಿದ್ದಾರೆ ಇದರಿಂದ‌ ಕೆಲಸ ಮಾಡಲು ಆಗುತ್ತಿಲ್ಲ ಎಂಬ ಅಳಲು ಕಾರ್ಯಕರ್ತೆಯರದ್ದಾಗಿದೆ. ರಾಜ್ಯದಲ್ಲಿ ಒಟ್ಟು 1 ಲಕ್ಷದ 18 ಸಾವಿರ ಮಹಿಳೆಯರು ಕೆಲಸ ಮಾಡ್ತಿದ್ದಾರೆ….

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend