ದಲಿತ ವಿದ್ಯಾರ್ಥಿ ಪರಿಷತ್ ನಾ ನೂತನ ಪದಾಧಿಕಾರಿಗಳ ಆಯ್ಕೆ…!!!
ಇಂದು ವಿಜಯಪುರ ಜಿಲ್ಲಾ ಘಟಕದ ಸಭೆಯನ್ನು ರಾಜ್ಯಾಧ್ಯಕ್ಷರಾದ ಶ್ರೀನಾಥ್ ಪೂಜಾರಿ ಅವರ ನೇತೃತ್ವದಲ್ಲಿ ಮಾಡಲಾಯಿತು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಪರಿಷತ್ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಪ್ರಯುಕ್ತ ಆಯೋಜನೆ ಮಾಡುತ್ತಿರುವ ರಾಜ್ಯ ಮಟ್ಟದ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಲಾಯಿತು.
ಈ ವೇಳೆ ತಿಕೋಟ, ಬಬಲೇಶ್ವರ್, ಬಸವನಬಾಗೇವಾಡಿ, ಮುದ್ದೇಬಿಹಾಳ ತಾಲ್ಲೂಕ ಘಟಕ ಮತ್ತು ವಿಜಯಪುರ ನಗರ ಘಟಕದ ನೂತನ ಪದಾಧಿಕಾರಿಗಳಿಗೆ ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಯಿತು.
ಸಭೆಯಲ್ಲಿ ರಾಜ್ಯ ಸಂಚಾಲಕ ಬಾಲಾಜಿ ಎಂ ಕಾಂಬಳೆ, ಜಿಲ್ಲಾಧ್ಯಕ್ಷರಾದ ಹರ್ಷವರ್ಧನ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಷಯಕುಮಾರ ಅಜಮನಿ, ನಗರ ಘಟಕದ ಅಧ್ಯಕ್ಷ ಆನಂದ ಮುದೂರ ಅಲ್ಲದೇ ಜಿಲ್ಲಾ ಹಾಗೂ ತಾಲ್ಲೂಕ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು…
ವರದಿ. ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030