ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪಠ್ಯ ಕ್ರಮವಾಗಿದ್ದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯಲು ಇಂಡಕ್ಷನ್ ಪ್ರೋಗ್ರಾಮನ್ನು ಉದ್ಘಾಟನೆ ಮಾಡಲಾಯಿತು.
ಹರಪನಹಳ್ಳಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿರುವುದರಿಂದ ಡಿಪ್ಲೋಮಾ ಕೋರ್ಸ್ ಗಳನ್ನು ಯಶಸ್ವಿಯಾಗಿ ಮುಗಿಸಲು ಅನುಕೂಲವಾಗುತ್ತದೆ ಎಂದು ಪ್ರಾಂಶುಪಾಲರಾದ ಯುಜಿ ಶರಣಪ್ಪ ಹೇಳಿದರು.
ಪಟ್ಟಣದ ಶ್ರೀ ತಳ್ಳು ಬಾಳು ಜಗದ್ಗುರು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ಸೆಮಿಸ್ಟರ್ಗೆ ಪ್ರವೇಶ ಪಡೆಯದಿರುವ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗ ಮೆಕಾನಿಕಲ್ ವಿಭಾಗ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗ ಹಾಗೂ ಸಿವಿಲ್ ವಿಭಾಗ ಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮ ಬದಲಾವಣೆಯಿಂದ ಪ್ರಸ್ತುತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳ ಕುರಿತು ಇಂಡಕ್ಷನ್ ಪ್ರೋಗ್ರಾಮನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ 20 ಪಠ್ಯಕ್ರಮವು ಅಂತರಾಷ್ಟ್ರೀಯ ಮಟ್ಟದ ಪಠ್ಯಕ್ರಮವಾಗಿದ್ದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯಲು ಹೆಚ್ಚು ಹೊತ್ತು ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರುಗಳಾದ ಕೆ.ಎಂ. ಗುರುದೇವ್. ಎಂ. ಜೆ. ತಿಪ್ಪೇಶ್. ಹೆಚ್ ಮಲ್ಲಿಕಾರ್ಜುನ. ಹಾಗೂ ಜಿ.ಕೆ. ಪರಮೇಶ್ವರಪ್ಪ. ಹಾಗೂ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು..
ವರದಿ.ಪ್ರತಾಪ್, ಸಿ, ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030