ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಹಳ್ಳಿಗಳಿಗೆ ಇಂದು ಸ್ಯಾನಿಟೈಸರ್, ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಲಾಯಿತು. ಸಾರ್ವಜನಿಕರಲ್ಲಿ ಕೋವಿಡ್ ಸೋಂಕಿನ ಬೀತಿ ಎದುರಾಗಿದೆ. ಈ ಬಾರಿ ಸಾವಿನ ಪ್ರಕರಣ ಜಾಸ್ತಿಯಾಗುತ್ತಿರುವ ಕಾರಣ ಗ್ರಾಮೀಣ ಭಾಗದ ಪ್ರತಿಯೊಂದು ಗ್ರಾಮ ಬಡಾವಣೆಗಳಲ್ಲಿ ಆತಂಕದಲ್ಲಿದ್ದಾರೆ. ಕೆಲ ಗ್ರಾಮಸ್ಥರು ಸ್ವಯಂ ಆಗಿ ಲಾಕ್ಡೌನ್ ಮಾಡಿಕೊಂಡಿದ್ದಾರೆ. ಹೀಗಾಗಿ, ವಲಸೆ ಕಾರ್ಮಿಕರು ಈಗಾಗಲೇ ರಸ್ತೆಯಲ್ಲಿ ಓಡಾಡಿದ ಪ್ರಯುಕ್ತ ಸ್ಯಾನಿಟೈಸರ್ ಸಿಂಪರಣೆ ಮಾಡುವ ಮೂಲಕ ಜನರಲ್ಲಿ ಕೋವಿಡ್ ಭೀತಿ ದೂರಮಾಡ ಬಹುದಾಗಿದೆ’ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ರಾಮಚಂದ್ರಪ್ಪ, ಶಶಿಕಲಾ-ಜಯಣ್ಣ, ಯಲಪ್ಪ, ಅಜ್ಜಣ್ಣ, ಬಿಲ್ ಕಲೆಕ್ಟರ್ ತಿಪ್ಪೇರುದ್ರಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030