ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಬಳ್ಳಾರಿ: ಕೂಡ್ಲಿಗಿ ತಾಲ್ಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ ಕರಿಬಸಮ್ಮ- ದುರುಗಪ್ಪ ಎ.ಕೆ ಹಾಗೂ ಉಪಧ್ಯಕ್ಷರಾಗಿ ಕೆ.ಎನ್ ರಾಘವೇಂದ್ರ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಕೃಷಿ ಅಧಿಕಾರಿ ಕೆ. ವಾಮದೇವ ಅವರು ಘೋಷಣೆ ಮಾಡಿದರು.<
ಇಂದು ಫೆಬ್ರವರಿ-4-2021 ಗುರುವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಎಂ ಕರಿಬಸಮ್ಮ-ದುರುಗಪ್ಪ. ಸಾಮಾನ್ಯ ಮೀಸಲು ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಎನ್ ರಾಘವೇಂದ್ರ ಮತ್ತು ಯಲ್ಲಪ್ಪ ನಾಮಪತ್ರ ಸಲ್ಲಿಸಿದ್ದರು.
ಸಾಮಾನ್ಯ ಸಭೆ ಕರೆದು ನಾಮಪತ್ರ ಪರಿಶೀಲನೆ ಮಾಡಲಾಯಿತು. ಹೂಡೇಂ ಗ್ರಾಮ ಪಂಚಾಯಿತಿಯ 19 ಸದಸ್ಯರು ಸಭೆಗೆ ಹಾಜರಿದ್ದರು. ಯಾರೂ ನಾಮಪತ್ರ ವಾಪಸ್ ಪಡೆಯದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಇದ್ದುದರಿಂದ ಕೆ ಕರಿಬಸಮ್ಮ-ದುರುಗಪ್ಪ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರ ಸಲ್ಲಿಸಿದ್ದರಿಂದ ಗುಪ್ತ ಮತದಾನ ನಡೆಸಲಾಯಿತು. ಗುಪ್ತ ಮತದಾನದಲ್ಲಿ ಕೆ ಎನ್ ರಾಘವೇಂದ್ರ (10), ಯಲ್ಲಪ್ಪ (9) ಮತ ಪಡೆದರು. ಹೆಚ್ಚು ಮತ ಪಡೆದ ಕೆ ಎನ್ ರಾಘವೇಂದ್ರ ಅವರನ್ನು ಉಪಾಧ್ಯಕ್ಷರು ಎಂದು ಪ್ರಕಟಿಸಲಾಯಿತು. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತಿದ್ದಂತೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಅಧಿಕಾರ ಸ್ವೀಕರಿಸಿ ಅಧ್ಯಕ್ಷರು,ಉಪಾಧ್ಯಕ್ಷರು ಮಾತನಾಡಿ, ನಾವು ಜನರ ಸೇವಕರು. ಜನರ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀಯುತ ನಾಗರಾಜ್ ರವರು, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ ಮಹಾಂತೇಶಯ್ಯ ಸ್ವಾಮಿ, ಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಗೋವಿಂದಪ್ಪ, ಠಾಣೆಯ ಸಿಬ್ಬಂದಿ ಬಂದೋ ಬಸ್ತ್ ಕಲ್ಪಿಸಿದ್ದರು. ಹಾಗೂ ಗ್ರಾಮ ಪಂಚಾಯತಿ ನೂತನ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿವರ್ಗದವರು ಉಪಸ್ಥಿತರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030