ತುಂಗಭದ್ರಾ ಪ್ರೌಢಶಾಲೆ ರಾಷ್ಟ್ರೀಯ ಮತದಾರರ ದಿನಾಚರಣೆ…!!!

Listen to this article

ತುಂಗಭದ್ರಾ ಪ್ರೌಢಶಾಲೆ
ರಾಷ್ಟ್ರೀಯ ಮತದಾರರ ದಿನಾಚರಣೆ

ಹೂವಿನ ಹಡಗಲಿ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ಇಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಯಶಸ್ವಿಯಾಗಿ ಆಯೋಗ ನಡೆಸುತ್ತಾ ಬಂದಿದೆ ಎಂದು
ಚಿತ್ರಕಲಾ ಶಿಕ್ಷಕ ದ್ವಾರಕೀಶ್ ರೆಡ್ಡಿ ತಿಳಿಸಿದರು.

ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ದೇಶದ ಪ್ರತಿಯೊಬ್ಬ ಪ್ರಜೆಯೂ
ತಪ್ಪದೇ ಮತದಾನ ಮಾಡುವ ಮೂಲಕ
ಪ್ರಜಾತಂತ್ರದಲ್ಲಿ ಮತಕ್ಕಿರುವ ಮೌಲ್ಯಗಳನ್ನು ಗಟ್ಟಿಗೊಳಿಸಬೇಕು ಎಂದರು.

ಹದಿನೆಂಟು ವರ್ಷ ವಯಸ್ಸಿನ ಎಲ್ಲರೂ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಬೇಕು ಎಂದು ಮುಖ್ಯ ಗುರು ಸುರೇಶ ಅಂಗಡಿ ತಿಳಿಸಿದರು.

ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ, ಕೆ ಬಸವರಾಜ, ಜಿ ಆನಂದ
ಲಂಬಾಣಿ ಗಿಡ್ಡಾನಾಯ್ಕ್
ಪ್ರತಿಮಾ ಎನ್, ಗೀತಾ ಪಿ ಎಂ, ರೇಖಾ ಎಸ್
ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ
ವಿದ್ಯಾರ್ಥಿಗಳು ಹಾಜರಿದ್ದರು..

ವರದಿ.ಅಜಯ್. ಚ. ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend